6:45 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ

22/10/2021, 09:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ.

ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ಹೀಗಾದರೆ ದೇಶಕ್ಕೆ ಅನ್ನ ಹಾಕು ರೈತನ ಪಾಡು ಹೇಗೆ ಎಂದು ಮಸ್ಕಿ ರೈತ ಸಂಘದ ಅಧ್ಯಕ್ಷ ವಿಜಯ್ ಬಡಿಗೇರ್ ಆಕ್ರೋಶ ವ್ಯಕ್ತ ಪಡಿಸಿದರು.

ಮಸ್ಕಿಯಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಕೃಷಿ ಕೇಂದ್ರ ಯಾರು ವಾಸವಿರದ ಜಾಗದಲ್ಲಿದೆ. ಜನರು ಅಲ್ಲಿಂದ ನಡೆದುಕೊಂಡು ಬರಬೇಕು. ಅಲ್ಲದೆ ರೈತರಿಗೆ ಬೇಕಾಗುವ ಕೃಷಿಗೆ ಅಗತ್ಯ ವಸ್ತುಗಳು ಸಿಗುವುದೇ ಇಲ್ಲ. ಟ್ಯಾಕ್ಟರ್, ಬಿತ್ತುವ ಯಂತ್ರೋಪಕರಣಗಳು ಅರ್ಜಿ ಹಾಕಿ ಎರಡು ವರ್ಷಗಳಾದರೂ ಇನ್ನು ಬಂದಿಲ್ಲ. ಹೀಗಾದರೆ ರೈತರ ಪಾಡೇನು. ರೈತರಿಗೆ ಅನುಕೂಲವಾಗದ ಕೃಷಿ ಕೇಂದ್ರ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು

ಮುತ್ತಿಗೆ ಹಾಕಿದರು. ಕೃಷಿ ಅಧಿಕಾರಿಗಳು ಮನವಿ ಪತ್ರಕ್ಕೆ ಸ್ಪಂದಿಸಿ ರೈತರು ಅನುಕೂಲವಾಗುವ ರೀತಿಯಲ್ಲಿ ಕೊಡಲಾಗುವುದು ಎಂದು ಹೇಳಿದರು.

ಅಮೀನ್ ಪಾಸ್ ದಿದ್ದಿಗಿ ಮಾತನಾಡಿ, ರೈತನ ಬಾಳು ಕಣ್ಣೀರಿನ ಗೋಳು. ರೈತ ಹೊಲದಲ್ಲಿ ಬೆಳೆದ ಬೆಳಗೆ ಬಂದ ಹಣ ದಲ್ಲಾಳಿಗಳು ತಿನ್ನುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ಸರಕಾರ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸಮರ್ಪಕವಾದ ಬೀಜಗಳನ್ನು, ಸಮರ್ಪಕ ಯಂತ್ರೋಪಕರಣಗಳ ರೈತರಿಗೆ ಒದಗಿಸಿಕೊಡಬೇಕೆಂದು ಅಧಿಕಾರಿಗಳ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು