6:27 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ

22/10/2021, 09:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ.

ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ಹೀಗಾದರೆ ದೇಶಕ್ಕೆ ಅನ್ನ ಹಾಕು ರೈತನ ಪಾಡು ಹೇಗೆ ಎಂದು ಮಸ್ಕಿ ರೈತ ಸಂಘದ ಅಧ್ಯಕ್ಷ ವಿಜಯ್ ಬಡಿಗೇರ್ ಆಕ್ರೋಶ ವ್ಯಕ್ತ ಪಡಿಸಿದರು.

ಮಸ್ಕಿಯಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಕೃಷಿ ಕೇಂದ್ರ ಯಾರು ವಾಸವಿರದ ಜಾಗದಲ್ಲಿದೆ. ಜನರು ಅಲ್ಲಿಂದ ನಡೆದುಕೊಂಡು ಬರಬೇಕು. ಅಲ್ಲದೆ ರೈತರಿಗೆ ಬೇಕಾಗುವ ಕೃಷಿಗೆ ಅಗತ್ಯ ವಸ್ತುಗಳು ಸಿಗುವುದೇ ಇಲ್ಲ. ಟ್ಯಾಕ್ಟರ್, ಬಿತ್ತುವ ಯಂತ್ರೋಪಕರಣಗಳು ಅರ್ಜಿ ಹಾಕಿ ಎರಡು ವರ್ಷಗಳಾದರೂ ಇನ್ನು ಬಂದಿಲ್ಲ. ಹೀಗಾದರೆ ರೈತರ ಪಾಡೇನು. ರೈತರಿಗೆ ಅನುಕೂಲವಾಗದ ಕೃಷಿ ಕೇಂದ್ರ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು

ಮುತ್ತಿಗೆ ಹಾಕಿದರು. ಕೃಷಿ ಅಧಿಕಾರಿಗಳು ಮನವಿ ಪತ್ರಕ್ಕೆ ಸ್ಪಂದಿಸಿ ರೈತರು ಅನುಕೂಲವಾಗುವ ರೀತಿಯಲ್ಲಿ ಕೊಡಲಾಗುವುದು ಎಂದು ಹೇಳಿದರು.

ಅಮೀನ್ ಪಾಸ್ ದಿದ್ದಿಗಿ ಮಾತನಾಡಿ, ರೈತನ ಬಾಳು ಕಣ್ಣೀರಿನ ಗೋಳು. ರೈತ ಹೊಲದಲ್ಲಿ ಬೆಳೆದ ಬೆಳಗೆ ಬಂದ ಹಣ ದಲ್ಲಾಳಿಗಳು ತಿನ್ನುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ಸರಕಾರ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸಮರ್ಪಕವಾದ ಬೀಜಗಳನ್ನು, ಸಮರ್ಪಕ ಯಂತ್ರೋಪಕರಣಗಳ ರೈತರಿಗೆ ಒದಗಿಸಿಕೊಡಬೇಕೆಂದು ಅಧಿಕಾರಿಗಳ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು