7:39 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಉಪ್ಪಿನಂಗಡಿ: ಬಾಲಕಿಯ ಅತ್ಯಾಚಾರ ಯತ್ನ; ಇಬ್ಬರು ಆರೋಪಿಗಳ ಬಂಧನ, ಪೋಕ್ಸೋ ದಾಖಲು

13/03/2023, 17:48

ಪುತ್ತೂರು(reporterkarnataka.com): ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಮರ ತುಂಡರಿಸುವ ಕೆಲಸ ಮೇಲೆ ಆರೋಪಿಗಳಿಬ್ಬರು ಕಳೆದ ಮೂರು ದಿನಗಳಿಂದ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.ಈ ಸಂದರ್ಭ ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ಮನೆಯಲ್ಲಿನ ಸದಸ್ಯರ ಬಗ್ಗೆ ಗಮನಿಸಿದ ಆರೋಪಿಗಳ ಪೈಕಿ ಹಸೈನಾರ್ ಶುಕ್ರವಾರ ಸಂಜೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿ, ಈ ನಂಬ್ರರಿಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಇನ್ನು ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ಹಸೈನಾರ್ ತನ್ನ ಸಹಚರ ಅಬ್ಬಾಸ್ ಎಂಬಾತನೊಂದಿಗೆ ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದರು. ಆಗ ಬಾಲಕಿ ಹಾಗೂ ಆಕೆಯ ತಾಯಿ ರಕ್ಷಣೆಗಾಗಿ ಬೊಬ್ಬೆ ಹೊಡೆದಾಗ ನೆರೆ ಮನೆಯವರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು