4:30 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳಕ್ಕೆ ಜಮೀನು: ಮಂಜೂರಾತಿ ನೀಡಲು ಮುಜರಾಯಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

13/06/2023, 15:56

ಪುತ್ತೂರು(reporterkarnataka.com): ಉಪ್ಪಿನಂಗಡಿಯ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಳದ ಉಪಯೋಗಕ್ಕೆ ಖಾಸಗಿ ಜಮೀನು ಖರೀದಿಸಲು ಮುಜರಾಯಿ ಇಲಾಖೆಯಿಂದ ಮಂಜೂರಾತಿ ನೀಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವರ ಕಚೇರಿಗೆ ತೆರಳಿ ಸಚಿವರ ಜೊತೆ ಮಾತುಕತೆ ನಡೆಸಿದ ಶಾಸಕರು ಈ ಮನವಿಯನ್ನು ನೀಡಿದ್ದಾರೆ.
ಈ ದೆವಸ್ಥಾನವು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದ್ದು, ಪ್ರವರ್ಗ ಎ ಸೇರಿದ ಅಧೀಸೂಚಿತ ಸಂಸ್ಥೆಯಾಗಿರುತ್ತದೆ. ಪ್ರಸಿದ್ದಿಯನ್ನು ಹೊಂದಿರುವ ಈ ದೇವಸ್ಥಾನಕ್ಕೆ ಊರು ಹಾಗೂ ಪರವೂರುಗಳಿಂದ್ ಲಕ್ಷಾಂತರ ಭಕ್ತಾಧಿಗಳು ಆಗಮಿಸುತ್ತಿದ್ದು ಅವರಿಗೆ ತಂಗಲು ವಸತಿ,ಮೂಲಸೌಕರ್ಯಗಳು, ಸೇರಿದಂತೆ ವಾಹನ ಪಾರ್ಕಿಂಗ್ ವ್ಯವಸ್ಥೆಗೆ ಜಾಗದ ಕೊರತೆಯಿದೆ. ಈ ದೇವಸ್ಥಾನಕ್ಕೆ ಹೊಂದಿಕೊಂಡಿರುವ ಪ್ರಭಾತ್ ಪೈ ಎಂಬವರಿಗೆ ಸೇರಿದ ಸರ್ವೆ ನಂಬ ೧-೨೦ ೦.೩೨ ಎಕ್ರೆ ಜಾಗವಿದ್ದು ಈ ಜಾಗವನ್ನು ದೇವಸ್ಥಾನದ ಉಪಯೋಗಕ್ಕಾಗಿ ಖರೀದಿಸಲು ದೇವಸ್ಥಾನದ ಆಡಳಿತ ಮಂಡಳಿ ಊರಿನ ಸಮಸ್ತ ಭಕ್ತಾದಿಗಳು ಸೇರಿ ಒಂದು ಮೊತ್ತವನ್ನು ನಿಗಧಿಮಾಡಿರುತ್ತರೆ. ಈ ಮೊತ್ತಕ್ಕೆ ಜಾಗ ನೀಡುವುದಾಗಿ ಜಾಗದ ಮಾಲಕರು ಒಪ್ಪಿಗೆಯನ್ನು ನೀಡಿರುತ್ತಾರೆ. ಜಾಗ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಗಳು ಜಾಗದ ದಾಖಲೆ, ದರಪಟ್ಟಿ ಕುರಿತ ಸಂಪೂರ್ಣ ಮಾಹಿತಿಯನ್ನು ಸೂಕ್ತ ವರದಿಯೊಂದಿಗೆ ಇಲಾಖಾ ಅನುಮತಿಗಾಗಿ ಸಲ್ಲಿಸಿದ್ದಾರೆ ಎಂದು ಶಾಸಕರು ಮನವಿಯಲ್ಲಿ ತಿಳಿಸಿದ್ದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರುಭಾಗದ ಈಶಾನ್ಯ ದಿಕ್ಕಿನಲ್ಲಿರುವ ಜಾಗವನ್ನು ಖರೀದಿಸಲು ಇಲಾಖೆ ಅನುವು ಮಾಡಿಕೊಡಬೇಕೆಂದು ಶಾಸಕರು ಸಚಿವರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಮುಜರಾಯಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೂ ಶಾಸಕರು ಮನವಿಯನ್ನು ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು