4:37 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಉಪ್ಪೂರಿನಲ್ಲಿ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ; ಅರ್ಧ ತಾಸು ಟ್ರಾಫಿಕ್ ಜಾಮ್

13/02/2023, 13:16

ಉಡುಪಿ(reporterkarnataka.com): ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ‌ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನು‌ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡ ಲಾರಿ ಚಾಲಕನನ್ನು ಕುಮಟದ ಕದಗಲ್ ಮೂಲದ ಮಹೇಶ್ ಗೌಡ ಹಾಗೂ ಬೈಕ್ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ.

ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ‌ಹೊಡೆದು, ರಸ್ತೆ ಬದಿಯ ದಾರಿದೀಪದ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಹಾಗೂ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಉಪ್ಪೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸುಕ್ಕಿಂತಲೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು