6:43 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನ ಆಚರಣೆ

22/09/2022, 12:10

ಮಂಗಳೂರು(reporterkarnataka.com): ನಗರದ ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಆಕರ್ಷಕ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಕೆನರಾ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಅತಿಥಿಗಳಾಗಿ ಆಗಮಿಸಿದ್ದು, ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಎಂ. ರಂಗನಾಥ ಭಟ್, ಜನ ಸಂಪರ್ಕ ಅಧಿಕಾರಿ ಉಜ್ವಲ್ ಮಲ್ಯ ಅವರು ಉಪಸ್ಥಿತರಿದ್ದರು. ಲಯನ್ಸ್ ಕ್ವೆಸ್ಟ್ ನ ಸಂಘಟಕರಾದ ಮಂದಾಕಿನಿ ಉಪಾಧ್ಯಾಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸುರೇಖಾ ಪೈ ಅವರು ಧ್ಯಾನವನ್ನು ಮಾಡಿಸುವ ಮೂಲಕ ಎಲ್ಲರಿಗೂ ಆತ್ಮ ಶಾಂತಿಯ ಅನುಭವವನ್ನು ಮನಗಾಣಿಸಿದರು.  ರಾಧಾಕೃಷ್ಣ ಐತಾಳ್ ಅವರು ಮಾತನಾಡಿ ವೈಯಕ್ತಿಕ ಮಟ್ಟದಲ್ಲಿ ಶಾಂತಿಯನ್ನು ಪರಿಪಾಲಿಸಲು ಅಗತ್ಯವಾದ ಸಲಹೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಂಧಕಾರದಿಂದ ಮೇಲೆದ್ದು ಬೆಳಕಿನೆಡೆಗೆ ನಮ್ಮ ಜೀವನವು ಸಾಗಬೇಕೆಂದು ಹಾರೈಸಿದರು. ಶಾಲಾ ಮುಕ್ಷೋಪಾಧ್ಯಾಯನಿಯಾದ ಲಲನಾ ಜೆ.ಶೆಣೈ ಅವರು ಉಪಸ್ಥಿತರಿದ್ದರು. 

ವಿದ್ಯಾರ್ಥಿ ಶ್ರಿಹಾನ್ ಶೆಣೈ ನಿರೂಪಿಸಿದರು. ಶಾಲಾ ನಾಯಕಿ ಕ್ಷಿತಿ ಪ್ರಭು ಸ್ವಾಗತಿಸಿ, ವಿದ್ಯಾರ್ಥಿಯಾದ ಸಾಯಿ ರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು