3:19 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನ ಆಚರಣೆ

22/09/2022, 12:10

ಮಂಗಳೂರು(reporterkarnataka.com): ನಗರದ ಉರ್ವ ಕೆನರಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಶಾಂತಿ ದಿನವನ್ನು ಆಚರಿಸಲಾಯಿತು. ಆಕರ್ಷಕ ಸ್ವಾಗತ ನೃತ್ಯದೊಂದಿಗೆ ಕಾರ್ಯಕ್ರಮವು ಆರಂಭವಾಯಿತು. ಕೆನರಾ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ. ರಾಧಾಕೃಷ್ಣ ಎಸ್. ಐತಾಳ್ ಅವರು ಅತಿಥಿಗಳಾಗಿ ಆಗಮಿಸಿದ್ದು, ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿಗಳಾದ ಎಂ. ರಂಗನಾಥ ಭಟ್, ಜನ ಸಂಪರ್ಕ ಅಧಿಕಾರಿ ಉಜ್ವಲ್ ಮಲ್ಯ ಅವರು ಉಪಸ್ಥಿತರಿದ್ದರು. ಲಯನ್ಸ್ ಕ್ವೆಸ್ಟ್ ನ ಸಂಘಟಕರಾದ ಮಂದಾಕಿನಿ ಉಪಾಧ್ಯಾಯ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸುರೇಖಾ ಪೈ ಅವರು ಧ್ಯಾನವನ್ನು ಮಾಡಿಸುವ ಮೂಲಕ ಎಲ್ಲರಿಗೂ ಆತ್ಮ ಶಾಂತಿಯ ಅನುಭವವನ್ನು ಮನಗಾಣಿಸಿದರು.  ರಾಧಾಕೃಷ್ಣ ಐತಾಳ್ ಅವರು ಮಾತನಾಡಿ ವೈಯಕ್ತಿಕ ಮಟ್ಟದಲ್ಲಿ ಶಾಂತಿಯನ್ನು ಪರಿಪಾಲಿಸಲು ಅಗತ್ಯವಾದ ಸಲಹೆಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು. ಅಂಧಕಾರದಿಂದ ಮೇಲೆದ್ದು ಬೆಳಕಿನೆಡೆಗೆ ನಮ್ಮ ಜೀವನವು ಸಾಗಬೇಕೆಂದು ಹಾರೈಸಿದರು. ಶಾಲಾ ಮುಕ್ಷೋಪಾಧ್ಯಾಯನಿಯಾದ ಲಲನಾ ಜೆ.ಶೆಣೈ ಅವರು ಉಪಸ್ಥಿತರಿದ್ದರು. 

ವಿದ್ಯಾರ್ಥಿ ಶ್ರಿಹಾನ್ ಶೆಣೈ ನಿರೂಪಿಸಿದರು. ಶಾಲಾ ನಾಯಕಿ ಕ್ಷಿತಿ ಪ್ರಭು ಸ್ವಾಗತಿಸಿ, ವಿದ್ಯಾರ್ಥಿಯಾದ ಸಾಯಿ ರಾಜ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು