7:18 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಉರ್ವಾ ಕೆನರಾ ಪ್ರೌಢ ಶಾಲೆಯ ಅಧ್ಯಾಪಕ, ಬಹುಮುಖ ಪ್ರತಿಭೆಯ ರವೀಂದ್ರನಾಥ ಶೆಟ್ಟಿ ನಿಧನ

23/05/2021, 21:19

ಮಂಗಳೂರು(reporterkarnataka news): ನಗರದ ಉರ್ವಾ ಕೆನರಾ ಪ್ರೌಢ ಶಾಲೆಯ ಅಧ್ಯಾಪಕ ಬಹುಮುಖ ಪ್ರತಿಭೆ ರವೀಂದ್ರನಾಥ ಶೆಟ್ಟಿ(44) ಅವರು ಹೃದಯಾಘಾತದಿಂದ ಭಾನುವಾರ ನಿಧನರಾದರು.

ಮೂಲತಃ ಬಾಕ್ರಬೈಲಿನವರಾಗಿರುವ ಅವರು ಕೆನರಾ ಪ್ರೌಢ ಶಾಲೆಯಲ್ಲಿ ಸುಮಾರು ಎರಡು ದಶಕಗಳಿಂದ ಅಧ್ಯಾಪಕರಾಗಿದ್ದರು. ಎಂಎ, ಎಂಫಿಲ್ ಪದವೀಧರರಾಗಿದ್ದು, ಎನ್‌ಸಿಸಿ ಅಧಿಕಾರಿಯೂ ಆಗಿದ್ದರು. ಎನ್‌ಸಿಸಿಯ ಸಾಧನೆಗಾಗಿ ಹತ್ತು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. 

ಹವ್ಯಾಸಿ ಯಕ್ಷಗಾನ ಮತ್ತು ರಂಗಭೂಮಿ ಕಲಾವಿದರಾಗಿದ್ದ ಅವರು, ಉತ್ತಮ‌ ಕಾರ್ಯಕ್ರಮ‌‌ ನಿರ್ವಾಹಕರೂ ಆಗಿ ಜನಮೆಚ್ಚುಗೆ ಗಳಿಸಿದ್ದರು.

ಪತ್ನಿ ದಿವ್ಯಾ, ಮೂರು ವರ್ಷದ ಮಗು ಸೇರಿದಂತೆ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ರವೀಂದ್ರನಾಥ ಅವರ ಅಗಲುವಿಕೆಗೆ ಕೆನರಾ ಪ್ರೌಢ ಶಾಲೆ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿ ಬಳಗ ತೀವ್ರ ಕಂಬನಿ ಮಿಡಿದಿದೆ. ವಿದ್ಯಾರ್ಥಿಗಳಿಗೆ ಅವರು ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು