10:18 AM Saturday19 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ನವ ದಿನಗಳ ನೊವೆನಾಕ್ಕೆ ಚಾಲನೆ: ಡಿ.8ರಂದು ವಾರ್ಷಿಕ ಹಬ್ಬ

28/11/2024, 23:38

ಮಂಗಳೂರು(reporterkarnataka.com): ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಮಾತೆ ಮೇರಿಗೆ ಸಮರ್ಪಿಸಿದ ನಗರದ ಲೇಡಿಹಿಲ್ ಉರ್ವ ಚರ್ಚಿನ ದೇವಾಲಯದಲ್ಲಿರುವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ ಡಿ.8ರಂದು ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನವದಿನಗಳ ನೊವೆನಾಕ್ಕೆ ಗುರುವಾರ ಚಾಲನೆ ನೀಡಲಾಯಿತು.


ಮಂಗಳೂರು ಎಪಿಸ್ಕೋಪಲ್ ಸಿಟಿ ಡೀನರಿಯ ಮುಖ್ಯಗುರು ಹಾಗೂ ಮಿಲಾಗ್ರಿಸ್ ಚರ್ಚಿನ ಪ್ರಧಾನ ಧರ್ಮಗುರು ಫಾ.ಬೊನವೆಂಚರ್ ನಜರೇತ್ ಅವರು ನವದಿನಗಳ ನೊವೆನಾಕ್ಕೆ ಚಾಲನೆಯನ್ನು ನೀಡಿದರು. ನೊವೆನಾಕ್ಕೂ ಮೊದಲು ಪುಣ್ಯ ಕ್ಷೇತ್ರದಲ್ಲಿ ಹಬ್ಬದ ಅಂಗವಾಗಿ ಧ್ವಜರೋಹಣವನ್ನು ನಡೆಸಲಾಯಿತು. ಈ ಸಂದರ್ಭ ಉರ್ವ ಲೇಡಿಹಿಲ್ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ, ಸಹಾಯಕ ಧರ್ಮಗುರು ಫಾ. ಲ್ಯಾನ್ಸನ್ ಪಿಂಟೋ, ವಿಶ್ರಾಂತ ಧರ್ಮಗುರು ಫಾ. ಹೆನ್ರಿ ಸಿಕ್ವೇರಾ, ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷ ಲೋಯ್ಡ್ ಲೋಬೋ, ಕಾರ್ಯದರ್ಶಿ ಸಿಲ್ವಿಯಾ ಮಸ್ಕರೇನಸ್, 21 ಆಯೋಗದ ಸಂಯೋಜಕ ಕೆವಿನ್ ಮಾರ್ಟಿಸ್ ಸೇರಿದಂತೆ ನೂರಾರು ಭಕ್ತಾದಿಗಳು ಹಾಜರಿದ್ದರು. ಡಿ.7ರ ವರೆಗೆ ನಾನಾ ವಿಷಯಗಳಲ್ಲಿ ಒಂಬತ್ತು ಧರ್ಮಗುರುಗಳ ನೇತೃತ್ವದಲ್ಲಿ ನವ ದಿನಗಳ ನೊವೆನಾಗಳು ಸಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು