7:23 PM Monday17 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದಲ್ಲಿ ನವ ದಿನಗಳ ನೊವೆನಾಕ್ಕೆ ಚಾಲನೆ: ಡಿ.8ರಂದು ವಾರ್ಷಿಕ ಹಬ್ಬ

28/11/2024, 23:38

ಮಂಗಳೂರು(reporterkarnataka.com): ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಅಧಿಕೃತ ಮಾತೆ ಮೇರಿಗೆ ಸಮರ್ಪಿಸಿದ ನಗರದ ಲೇಡಿಹಿಲ್ ಉರ್ವ ಚರ್ಚಿನ ದೇವಾಲಯದಲ್ಲಿರುವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ ಡಿ.8ರಂದು ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ನವದಿನಗಳ ನೊವೆನಾಕ್ಕೆ ಗುರುವಾರ ಚಾಲನೆ ನೀಡಲಾಯಿತು.


ಮಂಗಳೂರು ಎಪಿಸ್ಕೋಪಲ್ ಸಿಟಿ ಡೀನರಿಯ ಮುಖ್ಯಗುರು ಹಾಗೂ ಮಿಲಾಗ್ರಿಸ್ ಚರ್ಚಿನ ಪ್ರಧಾನ ಧರ್ಮಗುರು ಫಾ.ಬೊನವೆಂಚರ್ ನಜರೇತ್ ಅವರು ನವದಿನಗಳ ನೊವೆನಾಕ್ಕೆ ಚಾಲನೆಯನ್ನು ನೀಡಿದರು. ನೊವೆನಾಕ್ಕೂ ಮೊದಲು ಪುಣ್ಯ ಕ್ಷೇತ್ರದಲ್ಲಿ ಹಬ್ಬದ ಅಂಗವಾಗಿ ಧ್ವಜರೋಹಣವನ್ನು ನಡೆಸಲಾಯಿತು. ಈ ಸಂದರ್ಭ ಉರ್ವ ಲೇಡಿಹಿಲ್ ಚರ್ಚಿನ ಪ್ರಧಾನ ಧರ್ಮಗುರು ಫಾ. ಬೆಂಜಮಿನ್ ಪಿಂಟೋ, ಸಹಾಯಕ ಧರ್ಮಗುರು ಫಾ. ಲ್ಯಾನ್ಸನ್ ಪಿಂಟೋ, ವಿಶ್ರಾಂತ ಧರ್ಮಗುರು ಫಾ. ಹೆನ್ರಿ ಸಿಕ್ವೇರಾ, ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷ ಲೋಯ್ಡ್ ಲೋಬೋ, ಕಾರ್ಯದರ್ಶಿ ಸಿಲ್ವಿಯಾ ಮಸ್ಕರೇನಸ್, 21 ಆಯೋಗದ ಸಂಯೋಜಕ ಕೆವಿನ್ ಮಾರ್ಟಿಸ್ ಸೇರಿದಂತೆ ನೂರಾರು ಭಕ್ತಾದಿಗಳು ಹಾಜರಿದ್ದರು. ಡಿ.7ರ ವರೆಗೆ ನಾನಾ ವಿಷಯಗಳಲ್ಲಿ ಒಂಬತ್ತು ಧರ್ಮಗುರುಗಳ ನೇತೃತ್ವದಲ್ಲಿ ನವ ದಿನಗಳ ನೊವೆನಾಗಳು ಸಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು