4:04 AM Friday27 - September 2024
ಬ್ರೇಕಿಂಗ್ ನ್ಯೂಸ್
ಖಾಯಂ ಪಿಡಿಒ ನೇಮಕಕ್ಕೆ ಆಗ್ರಹಿಸಿ ತರುವೆ ಗ್ರಾ‌ಮ ಪಂಚಾಯಿತಿ ಎದುರು ಏಕಾಂಗಿ ಹೋರಾಟ ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಮಾಜಿ ಗೃಹ ಸಚಿವ ಆರಗ… ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

ಇತ್ತೀಚಿನ ಸುದ್ದಿ

ಉರ್ವಸ್ಟೋರ್: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

17/06/2024, 17:11

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ ನಗರದ ಉರ್ವಸ್ಟೋರ್ ಮಹಾಗಣಪತಿ ದೇವಸ್ಥಾನದ ಬಳಿಯ ಪ್ರಗತಿ ಮಹಿಳಾ ಮಂಡಲದಲ್ಲಿ ಜರುಗಿತು.
ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಂಗಳೂರು ಮಹಿಳಾ ಘಟಕ ,ಉರ್ವಸ್ಟೋರ್ ನ ಪ್ರಗತಿ ಮಹಿಳಾ ಮಂಡಲ ಹಾಗೂ ಬ್ರಹ್ಮ ಕುಮಾರೀಸ್ ಸಂಯುಕ್ತ ಆಶ್ರಯದಲ್ಲಿ ಶಿಬಿರ ಜರುಗಿತು .
ಕಾರ್ಯಕ್ರಮವನ್ನು ಬ್ರಹ್ಮ ಕುಮಾರಿ ಜಯಶ್ರೀ ಅವರು ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ತುಂಬಾ ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದೆ. ಪ್ರತಿಯೊಬ್ಬರಿಗೂ ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸುವ ಮೂಲಕ ಸ್ವಸ್ಥ ಆರೋಗ್ಯ ಪೂರ್ಣ ಸಮಾಜಕ್ಕೆ ಮಹತ್ತರವಾದ ಕೊಡುಗೆಯನ್ನು ನೀಡುತ್ತಿದೆ. ಶಾರೀರಿಕ ಆರೋಗ್ಯದ ಜೊತೆಗೆ ಮನಸ್ಥಿತಿಯು ಚೆನ್ನಾಗಿರಬೇಕು. ಈ ನಿಟ್ಟಿನಲ್ಲಿ ಧ್ಯಾನವು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಆರೋಗ್ಯಕ್ಕಾಗಿ ಔಷಧಿಗಳ ಜೊತೆಗೆ ಪ್ರತಿ ದಿನ ಧ್ಯಾನ ಮಾಡುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.
ನಿಧಿ ಲ್ಯಾಂಡ್ ಇನ್‌ಪ್ರಾಷ್ಟçಕ್ಚರ್ ಡೆವಲಪರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕರಾದ ಪ್ರಶಾಂತ್ ಕುಮಾರ್ ಸನಿಲ್‌ ಅವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರ ಮುಂದಾಳತ್ವದಲ್ಲಿ ಆಯೋಜಿಸುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ನಾಗೇಶ್ ಅಮೀನ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದಂತೆ ಕಾರ್ಯಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆಯೋಜಿಸುತ್ತಿರುವ ಇಂತಹ ಆರೋಗ್ಯ ಶಿಬಿರದಲ್ಲಿ ಸಹಕಾರ ನೀಡಿರುವುದು ತುಂಬಾ ಸಂತೋಷವಾಗುತ್ತಿದೆ ಎಂದರು.
ಉರ್ವಸ್ಟೋರ್ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷರಾದ ಪುಷ್ಪವತಿ ಕೆ. ಎ ರವರು ಮಾತನಾಡಿ, ಬಡವರ್ಗದ ಜನರಿಗೆ ಉಪಯೋಗವಾಗುವ ಇಂತಹ ಆರೋಗ್ಯ ಶಿಬಿರಗಳನ್ನು ನಮ್ಮ ಸಂಘದಲ್ಲಿ ನಡೆಸಲು ಅವಕಾಶ ಕಲ್ಪಿಸಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಇತರ ಸಂಘ-ಸಂಸ್ಥೆಗಳಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ
ಶುಭ ರಾಜೇಂದ್ರರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಲ್ಪಾವಧಿಯಲ್ಲಿ ಹಲವಾರು ಶಾಖೆಗಳನ್ನು ತೆರೆದು ಗ್ರಾಹಕರಿಗೆ ಉತ್ತಮ ಸೇವೆಗಳನ್ನು ನೀಡುತ್ತಿದೆ. ಇದರ ಜೊತೆಯಲ್ಲಿ ಉಚಿತ ಆರೋಗ್ಯ ಶಿಬಿರ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸ್ಮರ್ದಾತಕ ಪರೀಕ್ಷೆ ಎದುರಿಸಲು ಮಾರ್ಗದರ್ಶನ, ಬಡವರಿಗೆ ಉಚಿತ ಮನೆ ನಿರ್ಮಾಣ, ಬಸ್ಸು ತಂಗುದಾಣ ನಿರ್ಮಾಣ, ಮುಂತಾದ ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದರು.
ಕೆಎಂಸಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಹರ್ಬಟ್ ಪಿರೈರಾ ಅವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆಎಂಸಿ ಆಸ್ಪತ್ರೆಯು ಸುಮಾರು 40ಕ್ಕೂ ಮಿಕ್ಕಿ ಉಚಿತ ಶಿಬಿರಗಳನ್ನು ಆಯೋಜನೆ ಮಾಡಿದ್ದು, ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆಯನ್ನು ಮಾಡಲಾಗುವುದು, ಬಿಪಿ ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧಿ ವಿತರಣೆಯನ್ನು ನೀಡಲಾಗುವುದು ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 68ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಕಾರ್ಯಕ್ರಮವು ಬಡವರ್ಗದ ಜನರಿಗೆ ಮಾತ್ರವಲ್ಲದೇ ಶ್ರೀಮಂತ ವರ್ಗದ ಜನರಿಗೂ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಶಿಬಿರವನ್ನು ಆಯೋಜಿಸಲು ಸಹಕಾರ ನೀಡಿದ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಂಗಳೂರು ಮಹಿಳಾ ಘಟಕ , ಪ್ರಗತಿ ಮಹಿಳಾ ಮಂಡಲ ಹಾಗೂ ಬ್ರಹ್ಮ ಕುಮಾರೀಸ್ ಮಂಗಳೂರು, ಇದರ ಸರ್ವ ಪಧಾಧಿಕಾರಿಗಳಿಗೆ ಕ್ರತಜ್ನತೆಯನ್ನು ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನೂ ಇಂತಹ ಶಿಬಿರಗಳನ್ನು ಆಯೋಜಿಸಲು ಸಹಕಾರವನ್ನು ಕೋರಿದರು. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಕೆಎಂಸಿ ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿವರ್ಗದವರಿಗೂ _ಕ್ರತಜ್ನತೆಯನ್ನು ಸಲ್ಲಿಸಿದರು. ಸಂಘವು ಜೂನ್ 23ರಂದು ಉಚಿತ ಆರೋಗ್ಯ ಶಿಬಿರವನ್ನು ಪಡುಬಿದ್ರೆಯಲ್ಲಿ ಆಯೋಜಿಸಿದ್ದು, ಅತೀ ಶೀಘ್ರದಲ್ಲಿ ಸಂಘದ 33ನೇ ನೂತನ ಕೃಷ್ಣಾಪುರ ಶಾಖೆಯು ತನ್ನ ಸ್ವಂತ ಕಟ್ಟಡದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ. ನಿರ್ದೇಶಕರಾದ ಜಿ. ಪರಮೇಶ್ವರ ಪೂಜಾರಿ, ರಮನಾಥ್ ಸನಿಲ್, ಚಂದ್ರಹಾಸ ಮರೋಳಿ, ಮುದ್ದು ಮೂಡುಬೆಳ್ಳೆ, ಗೋಪಾಲ್ ಎಮ್., ಉಮಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಕೆಎಂಸಿ ಆಸ್ಪತ್ರೆಯ ಕಣ್ಣಿನ ವೈದ್ಯರಾದ ಡಾ. ಉರ್ಜಾ ಶರ್ಮ, ಯುವವಾಹಿನಿ ಮಂಗಳೂರು ಘಟಕದ ಆರೋಗ್ಯ ನಿರ್ದೇಶಕರಾದ ಅರುಣ್ ಕೋಟ್ಯಾನ್, ಯುವವಾಹಿನಿ
ಮಂಗಳೂರು ಘಟಕ, ಮಹಿಳಾ ಘಟಕ , ಪ್ರಗತಿ ಮಹಿಳಾ ಮಂಡಲ ಹಾಗೂ ಬ್ರಹ್ಮ ಕುಮಾರೀಸ್ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 250ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಔಷಧಿ ವಿತರಣೆ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಸಚಿನ್ ಸ್ವಾಗತಿಸಿದರು. ಶಾಖಾಧಿಕಾರಿ ಸುಜಾತ ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಶಾಖಾಧಿಕಾರಿಯಾದ ಸ್ವಾತಿ ನೆರವೇರಿಸಿದರು. ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರದ ಸಂಯೋಜನೆಯನ್ನು ಪ್ರಭಾರ ಶಾಖಾಧಿಕಾರಿಗಳಾದ ಸುಮನಾ ಹಾಗೂ ಆಶಾ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು