5:57 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಉರ್ವಸ್ಟೋರ್: ನಾಳೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

15/06/2024, 11:24

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವನ್ನು ನಗರದ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಬಳಿಯ ಪ್ರಗತಿ ಮಹಿಳಾ ಮಂಡಲದಲ್ಲಿ ಜೂನ್ 16ರಂದು ಪೂರ್ವಾಹ್ನ ಸಮಯ 9.30 ರಿಂದ ಅಪರಾಹ್ನ 12.30ರವರೆಗೆ ಆಯೋಜಿಸಲಾಗಿದೆ.
ಈ ಶಿಬಿರಕ್ಕೆ ಯುವವಾಹಿನಿ ಮಂಗಳೂರು ಘಟಕ, ಯುವವಾಹಿನಿ ಮಂಗಳೂರು ಮಹಿಳಾ ಘಟಕ , ಪ್ರಗತಿ ಮಹಿಳಾ ಮಂಡಲ ಉರ್ವಸ್ಟೋರ್ ಹಾಗೂ ಬ್ರಹ್ಮ ಕುಮಾರೀಸ್ ಮಂಗಳೂರು‌ ಸಾಥ್ ನೀಡಲಿದ್ದಾರೆ. ವೈದ್ಯಕೀಯ ಶಿಬಿರದಲ್ಲಿ ಅತ್ತಾವರ ಕೆಎಂಸಿ ಆಸ್ಪತ್ರೆಯ ನುರಿತ ವೈದ್ಯರ ತಂಡದಿಂದ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ, ಬಿಪಿ ಮತ್ತು ಮಧುಮೇಹ ತಪಾಸಣೆ, ಉಚಿತ ಔಷಧಿ ವಿತರಣೆ, ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳ ಕಣ್ಣಿನ ರೋಗಿಗಳಿಗೆ ಸಂಘದ ವತಿಯಿಂದ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು