3:37 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಉರ್ವಸ್ಟೋರ್ ಸುಂಕದಕಟ್ಟೆ; ಮಳೆಯಿಂದ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್  ಭೇಟಿ 

16/07/2022, 10:33

ಮಂಗಳೂರು(reporterkarnataka.com) :ದೇರೇಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯಲ್ಲಿ ಮಳೆಯಿಂದಾಗಿ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸುಂಕದಕಟ್ಟೆಯ ಪದ್ಮಾವತಿ ಎಂಬವರ ಮನೆಯು ಸಂಪೂರ್ಣವಾಗಿ ಹಾನಿಗೀಡಾಗಿದ್ದು ಅದೃಷ್ಟವಶಾತ್ ಜೀವಹಾನಿಯಾಗಿಲ್ಲ. ಈಗಾಗಲೇ ನಮ್ಮ ಕಾರ್ಯಕರ್ತರು ಕುಟುಂಬವನ್ನು ಅಲ್ಲಿಂದ ಬೇರೆಡೆ ಸ್ಥಳಾಂತರಿಸಿದ್ದು ದಿನಸಿ ಸಾಮಗ್ರಿಗಳ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು. 

ರಾಜ್ಯ ಸರಕಾರದಿಂದ ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ 5 ಲಕ್ಷ ಪರಿಹಾರ ನೀಡಲಾಗುತಿದ್ದು, ಬೇಕಾಗಿರುವ‌ ದಾಖಲೆಗಳನ್ನು ಪಡೆದು ತಕ್ಷಣವೇ ಪರಿಹಾರ ಧನ ಬಿಡುಗಡೆಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ರಾಜ್ಯ ಸರಕಾರವು ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ 5 ಲಕ್ಷ ಪರಿಹಾರ ಘೋಷಿಸಿರುವ ಕಾರಣ ಆರ್ಥಿಕವಾಗಿ ಹಿಂದುಳಿದ ಇಂತಹ ಅನೇಕ ಕುಟುಂಬಗಳಿಗೆ ಸಹಕಾರಿಯಾಗಿದೆ ಎಂದು ಶಾಸಕ ಕಾಮತ್ ನುಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರುಗಳಾದ ಜಯಲಕ್ಷ್ಮಿ ಶೆಟ್ಟಿ, ಮನೋಜ್ ಕುಮಾರ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಮಿತ್ ರಾಜ್, ಪುಷ್ಪ ಶೆಟ್ಟಿ, ಗೀತಾ ಭವಾನಿ ಶಂಕರ್, ದೀಕ್ಷಿತ್, ನಾರಾಯಣ ಪೂಜಾರಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು