1:52 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಉರ್ವಸ್ಟೋರ್ ಸುಂಕದಕಟ್ಟೆ; ಮಳೆಯಿಂದ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್  ಭೇಟಿ 

16/07/2022, 10:33

ಮಂಗಳೂರು(reporterkarnataka.com) :ದೇರೇಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯಲ್ಲಿ ಮಳೆಯಿಂದಾಗಿ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸುಂಕದಕಟ್ಟೆಯ ಪದ್ಮಾವತಿ ಎಂಬವರ ಮನೆಯು ಸಂಪೂರ್ಣವಾಗಿ ಹಾನಿಗೀಡಾಗಿದ್ದು ಅದೃಷ್ಟವಶಾತ್ ಜೀವಹಾನಿಯಾಗಿಲ್ಲ. ಈಗಾಗಲೇ ನಮ್ಮ ಕಾರ್ಯಕರ್ತರು ಕುಟುಂಬವನ್ನು ಅಲ್ಲಿಂದ ಬೇರೆಡೆ ಸ್ಥಳಾಂತರಿಸಿದ್ದು ದಿನಸಿ ಸಾಮಗ್ರಿಗಳ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು. 

ರಾಜ್ಯ ಸರಕಾರದಿಂದ ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ 5 ಲಕ್ಷ ಪರಿಹಾರ ನೀಡಲಾಗುತಿದ್ದು, ಬೇಕಾಗಿರುವ‌ ದಾಖಲೆಗಳನ್ನು ಪಡೆದು ತಕ್ಷಣವೇ ಪರಿಹಾರ ಧನ ಬಿಡುಗಡೆಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ರಾಜ್ಯ ಸರಕಾರವು ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ 5 ಲಕ್ಷ ಪರಿಹಾರ ಘೋಷಿಸಿರುವ ಕಾರಣ ಆರ್ಥಿಕವಾಗಿ ಹಿಂದುಳಿದ ಇಂತಹ ಅನೇಕ ಕುಟುಂಬಗಳಿಗೆ ಸಹಕಾರಿಯಾಗಿದೆ ಎಂದು ಶಾಸಕ ಕಾಮತ್ ನುಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರುಗಳಾದ ಜಯಲಕ್ಷ್ಮಿ ಶೆಟ್ಟಿ, ಮನೋಜ್ ಕುಮಾರ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಮಿತ್ ರಾಜ್, ಪುಷ್ಪ ಶೆಟ್ಟಿ, ಗೀತಾ ಭವಾನಿ ಶಂಕರ್, ದೀಕ್ಷಿತ್, ನಾರಾಯಣ ಪೂಜಾರಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು