ಇತ್ತೀಚಿನ ಸುದ್ದಿ
ಉರ್ವಸ್ಟೋರ್: ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ
23/08/2022, 11:25

ಮಂಗಳೂರು(Reporterkarnataka.com): ಉರ್ವಸ್ಟೋರ್ ಮಂಗಳ ಫ್ರೆಂಡ್ಸ್ ಸರ್ಕಲ್ ಬಳಿ ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ಕಾಮತ್, ನಗರದ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಕಬಡ್ಡಿ, ವಾಲಿಬಾಲ್, ಕ್ರಿಕೇಟ್ ಮುಂತಾದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆಯ ಕುರಿತು ಸರಕಾರದಿಂದ ಸವಲತ್ತುಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.
ಮಂಗಳ ಫ್ರೆಂಡ್ಸ್ ಸರ್ಕಲ್ ಮೂಲಕ ಅನೇಕ ಕ್ರೀಡಾಪಟುಗಳು ಇಂದಿಗೂ ರಾಜ್ಯವನ್ನು ಪ್ರತಿನಿಧಿಸುತಿದ್ದಾರೆ. ಆ ನಿಟ್ಟಿನಲ್ಲಿ ಕ್ರೀಡಾಂಗಣ ಅಭಿವೃದ್ಧಿಗೆ 40 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು, ಸ್ಥಳೀಯ ಪ್ರತಿಭೆಗಳು ನಾಡಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಉಪಯೋಗವಾಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ಜಯಲಕ್ಷ್ಮಿ ಶೆಟ್ಟಿ, ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಮಾಜಿ ಮೇಯರ್ ಪ್ರವೀಣ್ ಅಂಚನ್, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಪನಿರ್ದೇಶಕ ರವಿ ನಾಯ್ಕ್, ಮಾಜಿ ರಾಜ್ಯ ವಾಲಿಬಾಲ್ ಕ್ರೀಡಾಪಟು ಸುನಿಲ್ ಬಾಳಿಗ, ಉದ್ಯಮಿಗಳಾದ ಜಯ ಪ್ರಕಾಶ್ ರಾವ್, ರಮೇಶ್ ಶೆಟ್ಟಿ, ರವಿ, ರಾಜೇಂದ್ರ ಮುಂತಾದವರು ಉಪಸ್ಥಿತರಿದ್ದರು.