1:14 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಉರ್ವಸ್ಟೋರ್: ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ

23/08/2022, 11:25

ಮಂಗಳೂರು(Reporterkarnataka.com): ಉರ್ವಸ್ಟೋರ್ ಮಂಗಳ ಫ್ರೆಂಡ್ಸ್ ಸರ್ಕಲ್ ಬಳಿ ವಾಲಿಬಾಲ್ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಬಳಿಕ ಮಾತನಾಡಿದ ಶಾಸಕ ಕಾಮತ್, ನಗರದ ಅನೇಕ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಕಬಡ್ಡಿ, ವಾಲಿಬಾಲ್, ಕ್ರಿಕೇಟ್ ಮುಂತಾದ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳಿಗೆ ಸೂಕ್ತ ವ್ಯವಸ್ಥೆಯ ಕುರಿತು ಸರಕಾರದಿಂದ ಸವಲತ್ತುಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು. 

ಮಂಗಳ ಫ್ರೆಂಡ್ಸ್ ಸರ್ಕಲ್ ಮೂಲಕ ಅನೇಕ ಕ್ರೀಡಾಪಟುಗಳು ಇಂದಿಗೂ ರಾಜ್ಯವನ್ನು ಪ್ರತಿನಿಧಿಸುತಿದ್ದಾರೆ. ಆ ನಿಟ್ಟಿನಲ್ಲಿ  ಕ್ರೀಡಾಂಗಣ ಅಭಿವೃದ್ಧಿಗೆ 40 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಿದ್ದು, ಸ್ಥಳೀಯ ಪ್ರತಿಭೆಗಳು ನಾಡಿಗೆ ಕೀರ್ತಿ ತರುವ ನಿಟ್ಟಿನಲ್ಲಿ ಉಪಯೋಗವಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಗಣೇಶ್ ಕುಲಾಲ್, ಪಾಲಿಕೆ ಮುಖ್ಯ ಸಚೇತಕರಾದ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯರಾದ ಜಯಲಕ್ಷ್ಮಿ ಶೆಟ್ಟಿ, ಸಂಧ್ಯಾ ಮೋಹನ್ ಆಚಾರ್, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ರಾಧಾಕೃಷ್ಣ, ಮಾಜಿ ಮೇಯರ್ ಪ್ರವೀಣ್ ಅಂಚನ್, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಉಪನಿರ್ದೇಶಕ ರವಿ ನಾಯ್ಕ್, ಮಾಜಿ ರಾಜ್ಯ ವಾಲಿಬಾಲ್ ಕ್ರೀಡಾಪಟು ಸುನಿಲ್ ಬಾಳಿಗ,  ಉದ್ಯಮಿಗಳಾದ ಜಯ ಪ್ರಕಾಶ್ ರಾವ್, ರಮೇಶ್ ಶೆಟ್ಟಿ, ರವಿ, ರಾಜೇಂದ್ರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು