10:13 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಉರ್ವಾಸ್ಟೋರ್ ಮೈದಾನ ಬಳಿ ಮಟ್ಕಾ ದಂಧೆ: ಇಬ್ಬರ ಬಂಧನ; 4.24 ಲಕ್ಷ ರೂ. ನಗದು, ಸೊತ್ತು ವಶ

19/08/2023, 17:32

ಮಂಗಳೂರು(reporterkarnataka.com): ನಗರದ ಉರ್ವಾ ಸ್ಟೋರ್ ಮೈದಾನ ಬದಿಯಲ್ಲಿರುವ ಕಾಪೋರೇಶನ್ ಕಟ್ಟಡದ ದಿನಸಿ ಅಂಗಡಿಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚಿಲಿಂಬಿಯ ಗೋಕುಲದಾಸ್ ಶೆಣೈ(55) ಹಾಗೂ ಕೋಡಿಕಲ್ ನ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ವಶದಲ್ಲಿದ್ದ ಮಟ್ಕಾ ಚೀಟಿ ಗೆ ಸಂಬಂಧಿಸಿದ 424490 ರೂ.ನಗದು, ಮೊಬೈಲ್‌ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಉರ್ವಾ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಆಯುಕ್ತರಾದ ಕುಲದೀಪ್ ಜೈನ್‌ ಅವರ ಆದೇಶದಂತೆ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಯವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣಾ ಪಿಐ ಭಾರತಿ ಅವರ ತಂಡ ಹರೀಶ್ ಹೆಚ್.ಎ., ಸಫೀನಾ, ವೆಂಕಟೇಶ್, ರಾಮಚಂದ್ರ, ಸುನೀತ, ಭರಣಿ ದೀಕ್ಷಿತ್ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು