4:50 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

‘ಉಸಿರಿಗಾಗಿ  ಹಸಿರು’ ತಂಡದಿಂದ ಗಿಡ ಬೆಳೆಸುವ ಜಾಗೃತಿ: ಊರು, ಕೇರಿ, ಮನೆ ಹಿತ್ತಲಿನಲ್ಲಿ ಗಿಡ ನೆಟ್ಟು ಖುಷಿ ಖುಷಿ !

15/06/2021, 19:45

ಮಂಗಳೂರು(reporterkarnataka news):‘ಉಸಿರಿಗಾಗಿ  ಹಸಿರು’ ಎನ್ನುವ ಜಾಗೃತಿ ಕಾರ್ಯಕ್ರಮ ಅತ್ಯಂತ  ಹೆಚ್ಚಿನ  ಜನ ಮನ್ನಣೆ ಯೊಂದಿಗೆ ಜರುಗಿತು. ಗಿಡವನ್ನು ಬೆಳೆಸಬೇಕು ಎನ್ನುವ ಬಗ್ಗೆ ಅರಿವು ಮೂಡಿಸಲು ಜೂನ್ 8ರಂದು ಜನರು ತಮ್ಮ ಊರು, ಕೇರಿ, ಮನೆಯಲ್ಲಿ ಗಿಡ ನೆಡುವ ಕಾರ್ಯವನ್ನು ಮಾಡಬೇಕು. ವರ್ಷವಿಡೀ ನೆಟ್ಟ ಗಿಡವನ್ನು ಪೋಷಿಸಬೇಕು. ಗಿಡವನ್ನು ಕುಟುಂಬದಂತೆ ನೋಡಬೇಕು. ಈ ಕಾರ್ಯಕ್ಕೆ ಕೈ ಜೋಡಿಸುವವರು  ಆ ದಿನ ಗಿಡ ನೆಟ್ಟವರು ಪರಿಸರಕ್ಕೆ ಮಾಡಿದ ಸೇವೆಯನ್ನು ರಶ್ಮಿ ಉಳ್ಳಾಲ್ ತಂಡಕ್ಕೆ ಕಳುಹಿಸಿಕೊಡಲು ಕರೆ ನೀಡಿದ್ದು, ಇದಕ್ಕೆ ಮಂಗಳೂರಿನಾದ್ಯಂತ ಅತೀವ ಹೆಚ್ಚಿನ ಮಟ್ಟದಲ್ಲಿ ಪ್ರಶಂಸೆಯನ್ನು ಪಡೆದಿರುತ್ತದೆ. 

ಜೂನ್ 8 ರಂದು ರಶ್ಮಿ ಉಳ್ಳಾಲ್ ಅವರ ತಂಡ ತೊಕ್ಕೊಟ್ಟಿನಲ್ಲಿ ಗಿಡ ನೆಡುತ್ತಿದ್ದರೆ, ಇತರ ಪರಿಸರ ಪ್ರಿಯರು ತಮ್ಮ ತಮ್ಮ ಮನೆಯಲ್ಲಿ ಬೆಳಗ್ಗೆ 8.30 ಕ್ಕೆ ಸರಿಯಾಗಿ ಮೂಡಬಿದ್ರಿ, ಕಾರ್ಕಳ, ಕೆಂಜಾರ್ ಬೆಂಗಳೂರು, ಅಳೆದಂಗಡಿ, ಉಳ್ಳಾಲ್ , ಉಡುಪಿ ಕಡೆಯಿಂದ ತಾವು ನೆಟ್ಟ ಗಿಡದ ಚಿತ್ರವನ್ನು ಕಳುಹಿಸಿಕೊಟ್ಟಿದ್ದಾರೆ.


ಏಕ ಕಾಲದಲ್ಲಿ ನೂರಾರು ಗಿಡ ನೆಟ್ಟಿರೋದು ಪರಿಸರ ಪ್ರಿಯರಿಗೆ ಖುಷಿ ತಂದಿದೆ.ಇತ್ತೀಚಿನ ದಿನಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮರ ಕಡಿಯುವ ಕಾರ್ಯ ನಡೆಯುತ್ತಾ ಬಂದಿದ್ದು, ಗಿಡ ಬೆಳೆಸುವ ಹಾಗೂ ರಕ್ಷಿಸುವ ಕಾರ್ಯ ಮನೆಯಿಂದ ಆರಂಭ ಆಗಬೇಕು. ಹೀಗೆ ಮಾಡುವುದರಿಂದ  ಜನರಿಗೆ  ಗಿಡ ರಕ್ಷಿಸುವ ಮನೋಭಾವನೆ ಬೆಳೆಯಬಹುಧು ಎನ್ನುವ ಉದ್ದೇಶ  ಉಸಿರಿಗಾಗಿ ಹಸಿರು ತಂಡದ್ದಾಗಿದೆ.
ಇಂತಹ ಸಂದರ್ಭದಲ್ಲಿ ರಶ್ಮಿ ಉಳ್ಳಾಲ್ ಅವರು ತೊಕ್ಕೊಟ್ಟು ಪರಿಸರದಲ್ಲಿ  ತಮ್ಮ ತಂಡದ ಸಹಾಯದಿಂದ 2೦ ಗಿಡ ನೆಡುವ ಹಾಗೂ  ಮನೆಗೊಂದು ಸಸಿಯನ್ನು ವಿತರಿಸುವ ಕಾರ್ಯವನ್ನು ಮಾಡಿದ್ದು ಹೊಳೆ ದಾಸವಾಳ , ಬೇವಿನ ಗಿಡ, ಲಕ್ಷ್ಮಣ ಫಲ, ಮಹಾಗನಿ  10 ಗಿಡವನ್ನು ಮನೆ ಮನೆಗೆ ವಿತರಿಸುವ ಕಾರ್ಯವನ್ನು ಮಾಡಿದರು.

ಈ ಸಂದರ್ಭದಲ್ಲಿ ಪರಿಸರ ಪ್ರೇಮಿ ಮಾಧವ್ ಉಳ್ಳಾಲ್ , ಲತೀಶ್ , ಶರತ್ , ನಿತೀಶ್ ನಾಯರ್ , ಪ್ರಥ್ವಿರಾಜ್  ಶೆಟ್ಟಿ, ಶ್ರೀಕಾಂತ್  ,ಶ್ರೀಮಂತ್ ,ಬೃಜೇಶ್  ಉಪಸ್ಥಿತರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು