7:13 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಉಸಿರುಗಟ್ಟಿ ಸಾವು: ಬಾಲಕೃಷ್ಣ ಸಾವಿನ ಪ್ರಕರಣಕ್ಕೆ ಮಹತ್ವದ ಸಾಕ್ಷ್ಮ ಲಭ್ಯ; ಪತ್ನಿಯ ದುಷ್ಕೃತ್ಯಕ್ಕೆ ದೊರೆತ ದೊಡ್ಡ ಪುರಾವೆ

04/11/2024, 22:43

ಕಾರ್ಕಳ(reporterkarnataka.com): ಬಾಲಕೃಷ್ಣ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಮರಣೋತ್ತರ ವರದಿಯಲ್ಲಿ ಬಹಿರಂಗವಾಗಿದ್ದು, ಇದೀಗ ಕೊಲೆ ಪ್ರಕರಣಕ್ಕೆ ಬಲವಾದ ಸಾಕ್ಷ್ಯಲಭಿಸಿದೆ.


ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿ ಅವನ್ನು ಆತನ ಪತ್ನಿ, ರೀಲ್ಸ್ ರಾಣಿ ಎಂದೇ ಖ್ಯಾತಳಾಗಿದ್ದ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದರು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ಈ ಹಿನ್ನಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಶವದ ಮರಣೋತ್ತರ ವರದಿ ಹಾಗೂ ಶವದ ಅಂಗಾಗಗಳ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಈ ಪೈಕಿ ಮಣಿಪಾಲ ಆಸ್ಪತ್ರೆಯಿಂದ ಶವದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು ಬಾಲಕೃಷ್ಣ ಪೂಜಾರಿ ಸಾವಿನ ಕುರಿತು ಆತನ ಸಂಬಧಿಕರು ನೀಡಿರುವ ಸಂಶಯಾಸ್ಪದ ದೂರಿಗೆ ಹಾಗೂ ವೈದ್ಯಕೀಯ ವರದಿಗೆ ತಾಳೆಯಾಗುತ್ತಿದ್ದು ಬಾಲಕೃಷ್ಣ ಪೂಜಾರಿಯವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಮುಖದ ಮೇಲೆ ಗಾಯದ ಗುರುತುಗಳು ಮೂಡಿವೆ ಎಂದು ಪೋಸ್ಟ್ ಮಾರ್ಟಮ್ ವರದಿಯಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಮರಣೋತ್ತರ ವರದಿ ಆಧಾರಿಸಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು