9:11 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಉಸಿರುಗಟ್ಟಿ ಸಾವು: ಬಾಲಕೃಷ್ಣ ಸಾವಿನ ಪ್ರಕರಣಕ್ಕೆ ಮಹತ್ವದ ಸಾಕ್ಷ್ಮ ಲಭ್ಯ; ಪತ್ನಿಯ ದುಷ್ಕೃತ್ಯಕ್ಕೆ ದೊರೆತ ದೊಡ್ಡ ಪುರಾವೆ

04/11/2024, 22:43

ಕಾರ್ಕಳ(reporterkarnataka.com): ಬಾಲಕೃಷ್ಣ ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ಮರಣೋತ್ತರ ವರದಿಯಲ್ಲಿ ಬಹಿರಂಗವಾಗಿದ್ದು, ಇದೀಗ ಕೊಲೆ ಪ್ರಕರಣಕ್ಕೆ ಬಲವಾದ ಸಾಕ್ಷ್ಯಲಭಿಸಿದೆ.


ಅಜೆಕಾರು ನಿವಾಸಿ ಬಾಲಕೃಷ್ಣ ಪೂಜಾರಿ ಅವನ್ನು ಆತನ ಪತ್ನಿ, ರೀಲ್ಸ್ ರಾಣಿ ಎಂದೇ ಖ್ಯಾತಳಾಗಿದ್ದ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್‌ ಹೆಗ್ಡೆ ಸೇರಿ ಹತ್ಯೆಗೈದು ಬಳಿಕ ಇದು ಸಹಜ ಸಾವು ಎಂದು ನಾಟಕವಾಡಿದ್ದರು. ಈ ಸಾವಿನ ಕುರಿತು ಮೃತ ಬಾಲಕೃಷ್ಣ ಪೂಜಾರಿಯವರ ತಂದೆ ಸಂಜೀವ ಪೂಜಾರಿ ಹಾಗೂ ಪತ್ನಿ ಪ್ರತಿಮಾಳ ಸಹೋದರ ಸಂದೀಪ್ ಪೂಜಾರಿ ಸಂಶಯ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ಈ ಹಿನ್ನಲೆಯಲ್ಲಿ ಅಜೆಕಾರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಶವದ ಮರಣೋತ್ತರ ವರದಿ ಹಾಗೂ ಶವದ ಅಂಗಾಗಗಳ ಸ್ಯಾಂಪಲ್‌ಗಳನ್ನು ಎಫ್‌ಎಸ್‌ಎಲ್ ಗೆ ರವಾನಿಸಿದ್ದರು. ಈ ಪೈಕಿ ಮಣಿಪಾಲ ಆಸ್ಪತ್ರೆಯಿಂದ ಶವದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರ ಕೈಸೇರಿದ್ದು ಬಾಲಕೃಷ್ಣ ಪೂಜಾರಿ ಸಾವಿನ ಕುರಿತು ಆತನ ಸಂಬಧಿಕರು ನೀಡಿರುವ ಸಂಶಯಾಸ್ಪದ ದೂರಿಗೆ ಹಾಗೂ ವೈದ್ಯಕೀಯ ವರದಿಗೆ ತಾಳೆಯಾಗುತ್ತಿದ್ದು ಬಾಲಕೃಷ್ಣ ಪೂಜಾರಿಯವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಹಾಗೂ ಆ ಸಂದರ್ಭದಲ್ಲಿ ಮುಖದ ಮೇಲೆ ಗಾಯದ ಗುರುತುಗಳು ಮೂಡಿವೆ ಎಂದು ಪೋಸ್ಟ್ ಮಾರ್ಟಮ್ ವರದಿಯಲ್ಲಿ ಬಹಿರಂಗವಾಗಿದೆ ಎಂದು ತಿಳಿದು ಬಂದಿದೆ.
ಮರಣೋತ್ತರ ವರದಿ ಆಧಾರಿಸಿ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು