3:19 AM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಉತ್ಸವಕ್ಕೆ ಮುಖ ತೋರಿಸದ ಮುಖ್ಯಮಂತ್ರಿ: ಬಹುಸಂಸ್ಕೃತಿಯ ಮರೆತರೇ ಸಿಎಂ ಸಿದ್ದರಾಮಯ್ಯರು?

18/01/2025, 11:12

ಮಂಗಳೂರು(reporterkarnataka.com): ಇದು ಬಹು ಸಂಸ್ಕೃತಿ ಉತ್ಸವದ ಕರುಣಾಜನಕ ಕತೆ. ಮುಖ್ಯಮಂತ್ರಿಗಳಿಗಾಗಿ ಮೂರು ಬಾರಿ ಮುಂದೂಡಲ್ಪಟ್ಟ ಕಾರ್ಯಕ್ರಮ ಸಿಎಂ ಮಂಗಳೂರಿನಲ್ಲೇ ಇದ್ದರೂ ಕೊನೆಗೂ ಅವರ ಗೈರು ಹಾಜರಿಯಲ್ಲಿ ನಡೆಯಿತು.
ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು
ಯಕ್ಷಗಾನ ಅಕಾಡೆಮಿ ವತಿಯಿಂದ ಶುಕ್ರವಾರ ಮಂಗಳೂರಿನ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವವನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಅವರಿಂದ ಉದ್ಘಾಟನೆಗೆ ಸಮಯ ನಿಗದಿ ಮಾಡಲಾಗಿತ್ತು. ಸಿಎಂ ಅವರ ಅಧಿಕೃತ ಕಾರ್ಯಕ್ರಮದ ಪಟ್ಟಿಯಲ್ಲೂ ಇದು ಸೇರಿತ್ತು. ಬೆಳಗ್ಗೆ 10 ಗಂಟೆಯಿಂದಲೇ ಎಲ್ಲ ಅಕಾಡೆಮಿಯ ಅಧ್ಯಕ್ಷರು ಶೃಂಗರಿಸಿಕೊಂಡು ಬಂದಿದ್ದರು. ಪುರಭವನದ ಹೊರಗಡೆ ಬೆಳಗ್ಗೆ 10 ಗಂಟೆಯಿಂದ ಬ್ಯಾಂಡ್ ಸೆಟ್ ನವರು ನಾದ ಹೊರಡಿಸುತ್ತಿದ್ದರು. ಎಲ್ಲ ಅಕಾಡೆಮಿಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಮದುವೆ ಮನೆಯಲ್ಲಿ ಓಡಾಡುವ ರೀತಿಯಲ್ಲಿ ಸಂಭ್ರಮದಿಂದ ಓಡಾಡುತ್ತಿದ್ದರು. ಆದರೆ ಮಧ್ಯಾಹ್ನ 12 ಗಂಟೆ ಕಳೆದು 2 ಗಂಟೆಯಾದರೂ ಸಿಎಂ ಬರಲೇ ಇಲ್ಲ. ಇನ್ನೇನು ಸಂಜೆ ಬರಬಹುದು ಎಂದು ಅಕಾಡೆಮಿ ಅಧ್ಯಕ್ಷರುಗಳು ಖುಷಿಯಲ್ಲಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ನಿರ್ಗಮಿಸುವ ವರೆಗೂ ಪುರಭವನದತ್ತ ಕಾಲು ಹಾಕಲೇ ಇಲ್ಲ. ವೇದಿಕೆಗಳಲ್ಲಿ ಬಹು ಸಂಸ್ಕೃತಿಯ ಬಗ್ಗೆ ಆಗಾಗ ಮಾತನಾಡುವ ಸಿದ್ದರಾಮಯ್ಯ ಅವರು ಬಹು ಸಂಸ್ಕೃತಿ ಉತ್ಸವದ ಉದ್ಘಾಟನೆ ಬಿಡಿ, ಕನಿಷ್ಠ ಪಕ್ಷ ಮುಖ ಕೂಡ ತೋರಿಸದಿರುವುದಕ್ಕೆ ಕಾರಣ ನಿಜಕ್ಕೂ ನಿಗೂಢವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು