6:03 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಉತ್ಸವಕ್ಕೆ ಮುಖ ತೋರಿಸದ ಮುಖ್ಯಮಂತ್ರಿ: ಬಹುಸಂಸ್ಕೃತಿಯ ಮರೆತರೇ ಸಿಎಂ ಸಿದ್ದರಾಮಯ್ಯರು?

18/01/2025, 11:12

ಮಂಗಳೂರು(reporterkarnataka.com): ಇದು ಬಹು ಸಂಸ್ಕೃತಿ ಉತ್ಸವದ ಕರುಣಾಜನಕ ಕತೆ. ಮುಖ್ಯಮಂತ್ರಿಗಳಿಗಾಗಿ ಮೂರು ಬಾರಿ ಮುಂದೂಡಲ್ಪಟ್ಟ ಕಾರ್ಯಕ್ರಮ ಸಿಎಂ ಮಂಗಳೂರಿನಲ್ಲೇ ಇದ್ದರೂ ಕೊನೆಗೂ ಅವರ ಗೈರು ಹಾಜರಿಯಲ್ಲಿ ನಡೆಯಿತು.
ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು
ಯಕ್ಷಗಾನ ಅಕಾಡೆಮಿ ವತಿಯಿಂದ ಶುಕ್ರವಾರ ಮಂಗಳೂರಿನ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವವನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಅವರಿಂದ ಉದ್ಘಾಟನೆಗೆ ಸಮಯ ನಿಗದಿ ಮಾಡಲಾಗಿತ್ತು. ಸಿಎಂ ಅವರ ಅಧಿಕೃತ ಕಾರ್ಯಕ್ರಮದ ಪಟ್ಟಿಯಲ್ಲೂ ಇದು ಸೇರಿತ್ತು. ಬೆಳಗ್ಗೆ 10 ಗಂಟೆಯಿಂದಲೇ ಎಲ್ಲ ಅಕಾಡೆಮಿಯ ಅಧ್ಯಕ್ಷರು ಶೃಂಗರಿಸಿಕೊಂಡು ಬಂದಿದ್ದರು. ಪುರಭವನದ ಹೊರಗಡೆ ಬೆಳಗ್ಗೆ 10 ಗಂಟೆಯಿಂದ ಬ್ಯಾಂಡ್ ಸೆಟ್ ನವರು ನಾದ ಹೊರಡಿಸುತ್ತಿದ್ದರು. ಎಲ್ಲ ಅಕಾಡೆಮಿಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಮದುವೆ ಮನೆಯಲ್ಲಿ ಓಡಾಡುವ ರೀತಿಯಲ್ಲಿ ಸಂಭ್ರಮದಿಂದ ಓಡಾಡುತ್ತಿದ್ದರು. ಆದರೆ ಮಧ್ಯಾಹ್ನ 12 ಗಂಟೆ ಕಳೆದು 2 ಗಂಟೆಯಾದರೂ ಸಿಎಂ ಬರಲೇ ಇಲ್ಲ. ಇನ್ನೇನು ಸಂಜೆ ಬರಬಹುದು ಎಂದು ಅಕಾಡೆಮಿ ಅಧ್ಯಕ್ಷರುಗಳು ಖುಷಿಯಲ್ಲಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ನಿರ್ಗಮಿಸುವ ವರೆಗೂ ಪುರಭವನದತ್ತ ಕಾಲು ಹಾಕಲೇ ಇಲ್ಲ. ವೇದಿಕೆಗಳಲ್ಲಿ ಬಹು ಸಂಸ್ಕೃತಿಯ ಬಗ್ಗೆ ಆಗಾಗ ಮಾತನಾಡುವ ಸಿದ್ದರಾಮಯ್ಯ ಅವರು ಬಹು ಸಂಸ್ಕೃತಿ ಉತ್ಸವದ ಉದ್ಘಾಟನೆ ಬಿಡಿ, ಕನಿಷ್ಠ ಪಕ್ಷ ಮುಖ ಕೂಡ ತೋರಿಸದಿರುವುದಕ್ಕೆ ಕಾರಣ ನಿಜಕ್ಕೂ ನಿಗೂಢವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು