9:02 AM Wednesday13 - May 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ

ಇತ್ತೀಚಿನ ಸುದ್ದಿ

ಉತ್ಸವಕ್ಕೆ ಮುಖ ತೋರಿಸದ ಮುಖ್ಯಮಂತ್ರಿ: ಬಹುಸಂಸ್ಕೃತಿಯ ಮರೆತರೇ ಸಿಎಂ ಸಿದ್ದರಾಮಯ್ಯರು?

18/01/2025, 11:12

ಮಂಗಳೂರು(reporterkarnataka.com): ಇದು ಬಹು ಸಂಸ್ಕೃತಿ ಉತ್ಸವದ ಕರುಣಾಜನಕ ಕತೆ. ಮುಖ್ಯಮಂತ್ರಿಗಳಿಗಾಗಿ ಮೂರು ಬಾರಿ ಮುಂದೂಡಲ್ಪಟ್ಟ ಕಾರ್ಯಕ್ರಮ ಸಿಎಂ ಮಂಗಳೂರಿನಲ್ಲೇ ಇದ್ದರೂ ಕೊನೆಗೂ ಅವರ ಗೈರು ಹಾಜರಿಯಲ್ಲಿ ನಡೆಯಿತು.
ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ, ಕೊಡವ ಮತ್ತು
ಯಕ್ಷಗಾನ ಅಕಾಡೆಮಿ ವತಿಯಿಂದ ಶುಕ್ರವಾರ ಮಂಗಳೂರಿನ ಪುರಭವನದಲ್ಲಿ ಬಹು ಸಂಸ್ಕೃತಿ ಉತ್ಸವವನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಅವರಿಂದ ಉದ್ಘಾಟನೆಗೆ ಸಮಯ ನಿಗದಿ ಮಾಡಲಾಗಿತ್ತು. ಸಿಎಂ ಅವರ ಅಧಿಕೃತ ಕಾರ್ಯಕ್ರಮದ ಪಟ್ಟಿಯಲ್ಲೂ ಇದು ಸೇರಿತ್ತು. ಬೆಳಗ್ಗೆ 10 ಗಂಟೆಯಿಂದಲೇ ಎಲ್ಲ ಅಕಾಡೆಮಿಯ ಅಧ್ಯಕ್ಷರು ಶೃಂಗರಿಸಿಕೊಂಡು ಬಂದಿದ್ದರು. ಪುರಭವನದ ಹೊರಗಡೆ ಬೆಳಗ್ಗೆ 10 ಗಂಟೆಯಿಂದ ಬ್ಯಾಂಡ್ ಸೆಟ್ ನವರು ನಾದ ಹೊರಡಿಸುತ್ತಿದ್ದರು. ಎಲ್ಲ ಅಕಾಡೆಮಿಯ ಸಿಬ್ಬಂದಿಗಳು ಹಾಗೂ ಅಧಿಕಾರಿಗಳು ಮದುವೆ ಮನೆಯಲ್ಲಿ ಓಡಾಡುವ ರೀತಿಯಲ್ಲಿ ಸಂಭ್ರಮದಿಂದ ಓಡಾಡುತ್ತಿದ್ದರು. ಆದರೆ ಮಧ್ಯಾಹ್ನ 12 ಗಂಟೆ ಕಳೆದು 2 ಗಂಟೆಯಾದರೂ ಸಿಎಂ ಬರಲೇ ಇಲ್ಲ. ಇನ್ನೇನು ಸಂಜೆ ಬರಬಹುದು ಎಂದು ಅಕಾಡೆಮಿ ಅಧ್ಯಕ್ಷರುಗಳು ಖುಷಿಯಲ್ಲಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ನಿರ್ಗಮಿಸುವ ವರೆಗೂ ಪುರಭವನದತ್ತ ಕಾಲು ಹಾಕಲೇ ಇಲ್ಲ. ವೇದಿಕೆಗಳಲ್ಲಿ ಬಹು ಸಂಸ್ಕೃತಿಯ ಬಗ್ಗೆ ಆಗಾಗ ಮಾತನಾಡುವ ಸಿದ್ದರಾಮಯ್ಯ ಅವರು ಬಹು ಸಂಸ್ಕೃತಿ ಉತ್ಸವದ ಉದ್ಘಾಟನೆ ಬಿಡಿ, ಕನಿಷ್ಠ ಪಕ್ಷ ಮುಖ ಕೂಡ ತೋರಿಸದಿರುವುದಕ್ಕೆ ಕಾರಣ ನಿಜಕ್ಕೂ ನಿಗೂಢವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು