4:25 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಉತ್ತರಾಖಂಡ ಮುಖ್ಯಮಂತ್ರಿ ತಿರತ್ ಸಿಂಗ್ ರಾವತ್ ರಾಜೀನಾಮೆ: ನಾಲ್ಕೇ ತಿಂಗಳಲ್ಲಿ ಅಧಿಕಾರದಿಂದ ನಿರ್ಗಮನ

03/07/2021, 17:13

ನವದೆಹಲಿ(reporterkarnataka news): ಉತ್ತರಾಖಂಡ ಮುಖ್ಯಮಂತ್ರಿ ಸ್ಥಾನಕ್ಕೆ ತಿರತ್ ಸಿಂಗ್ ರಾವತ್ ಅವರು ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಾಲ್ಕು ತಿಂಗಳಲ್ಲಿ ಅವರು ಅಧಿಕಾರದಿಂದ ನಿರ್ಗಮಿಸಿದ್ದಾರೆ.

ಶುಕ್ರವಾರ ರಾತ್ರಿ 9: 30 ಕ್ಕೆ ಪತ್ರಿಕಾಗೋಷ್ಠಿ ನಡೆಸಿದ್ದ ಅವರು, ಶನಿವಾರ ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಬೇಬಿ ರಾಣಿ ಮೌರ್ಯ ಅವರನ್ನು ಭೇಟಿಯಾಗಲಿರುವುದಾಗಿ ತಿಳಿಸಿದ್ದರು. ಆದರೆ ಶುಕ್ರವಾರ ರಾತ್ರಿಯೇ 11 ಗಂಟೆಗೆ ರಾಜ್ಯಪಾಲರ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ತಿರತ್ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ 6 ತಿಂಗಳೊಳಗೆ ಶಾಸಕರಾಗಿ ಆಯ್ಕೆಯಾಗಬೇಕಿತ್ತು. ಆದರೆ ಕೊವಿಡ್ ಕಾರಣಗಳಿಂದಾಗಿ ಚುನಾವಣೆ ನಡೆಸಲು ಸಾಧ್ಯವಿಲ್ಲದ ಕಾರಣ, ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಬಾರದು ಎಂಬ ನೆಲೆಯಲ್ಲಿ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ.

ತ್ರಿವೇಂದ್ರ ಸಿಂಗ್ ರಾವತ್ ಅವರಿಂದ ರಾಜೀನಾಮೆ ಕೊಡಿಸಿದ ನಂತರ ಮಾರ್ಚ್ ನಲ್ಲಿ ತಿರತ್ ಸಿಂಗ್ ರಾವತ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಅವರೂ ರಾಜೀನಾಮೆ ನೀಡಿರುವುದರಿಂದ ಉತ್ತರಾಖಂಡದ ಬಿಜೆಪಿ ಶಾಸಕರು ಇಂದು ಶಾಸಕಾಂಗ ಸಭೆ ಸೇರಿ ಹೊಸ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು