10:56 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದಲ್ಲಿ ಕಾರಹುಣ್ಣಿಮೆ ಸಂಭ್ರಮ: ಗಡಿ ಭಾಗದಲ್ಲಿ ಮಣ್ಣೆತ್ತಿನ ಖರೀದಿ ಜೋರು; ಹಸುಗಳಿಗೆ ಬಣ್ಣದ ಹಗ್ಗ ಗೊಂಡೆಗೆ ಮುಗಿಬಿದ್ದ ರೈತರು

03/06/2023, 21:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ಕಾರ ಹುಣ್ಣಿಮೆಯನ್ನ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಅದರಲ್ಲು ಉತ್ತರ ಕರ್ನಾಟಕದಲ್ಲಿ ತನ್ನದೇ ವಿಶೇಷತೆಯಿಂದ ಆಚರಿಸಲ್ಪಡುತ್ತದೆ. ಇದರಂಗವಾಗಿ ಮಣ್ಣೆತ್ತಿನ ಖರೀದಿಯು ಜೋರಾಗಿಯೇ ನಡೆಯಿತು.
ಬೆಳಗಾವಿಯ ಕಾಗವಾಡ ವಿಧಾನ ಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ಕಾರಹುಣ್ಣಿಮೆ ನಿಮಿತ್ಯ ಬಣ್ಣ ಬಣ್ಣದ ಹಗ್ಗ ಗೊಂಡೆಗಳನ್ನ ತೆಗೆದುಕೊಳ್ಳಲು ರೈತರು ಅಂಗಡಿ ಮುಂಗ್ಗಟ್ಟಿಗೆ ಮುಗಿ ಬಿದಿದ್ದರು. ಗ್ರಾಮದ ಕುಂಬಾರರ ಮನೆಯಲ್ಲಿನ ಮಣ್ಣೆತ್ತಿನ ಪೂಜೆ ಮಾಡುವುದು ವಾಡಿಕೆ ಇದೆ ಅದರಂತೆ ಮಣ್ಣೆತ್ತಿನ ಖರೀದಿಯು ಜೋರಾಗಿ ಇತ್ತು.

ಸುಮಾರು ಮೂರು ದಿನಗಳ ಕಾಲ ಆಚರಿಸುವ ಕಾರಹುಣ್ಣಿಮೆ ಮಳೆಗಾಲದ ಮೊದಲ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೊದಲನೆ ದಿನ ಹೊನ್ನಹುಗ್ಗಿ, ಎರಡನೆ ದಿನ ಕಾರ ಹುಣ್ಣಿಮೆ ಹಾಗೂ ಮೂರನೇ ದಿನ ಕರಿ ಹರಿಯುವಿಕೆ ಅಂತಾ ಆಚರಿಸಲ್ಪಡುತ್ತದೆ. ಕಾರ ಹುಣ್ಣಿಮೆ ಆಚರಣೆಗೆ ತನ್ನದೇ ಪುರಾತನ ಹಿನ್ನೆಲೆಯು ಇದೆ.
ಒಮ್ಮೆ ಕೈಲಾಸದಲ್ಲಿ ಪಾರ್ವತಿ ದೇವಿಯು ಹುಗ್ಗಿ ( ಪಾಯಸ ) ಮಾಡುವಾಗ ಬೆರಳಲ್ಲಿದ್ದ ಚಿನ್ನದ ಉಂಗುರ ಜಾರಿ ಪಾತ್ರೆಯಲ್ಲಿದ್ದ ಕುದಿಯುವ ಹುಗ್ಗಿ ( ಪಾಯಸ ) ದಲ್ಲಿ ಬಿಳ್ಳುತ್ತದೆ. ಅವಾಗ ಪಾರ್ವತಿ ದೇವಿಯು ಉಂಗುರ ಹೊರತೆಗೆಯಲು ಪ್ರಯತ್ನಿಸುತ್ತಾಳೆ. ಎಷ್ಟೇ ಪ್ರಯತ್ನ ಪಟ್ಟರು ಉಂಗುರ ಹೊರತೆಗೆಯಲು ಆಗದೆ ಇದ್ದಾಗ ಪಾರ್ವತಿ ದೇವಿಯು ಶಿವನ ಮೊರೆ ಹೋಗುತ್ತಾಳೆ. ಅವಾಗ ಶಿವನ ವಾಹನ ನಂದಿಗೆ ಶಿವ ಆದ್ನೇ ನೀಡುತ್ತಾನೆ. ಅವಾಗ ನಂದಿಯು ತನ್ನ ಕೊಂಬಿ ನಿಂದ ಕುದಿಯುತ್ತಿದ್ದ ಹುಗ್ಗಿ ( ಪಾಯಸ ) ದಿಂದ ಚಿನ್ನದ ಉಂಗುರ ಹೊರತೆಗೆದು ಪಾರ್ವತಿ ದೇವಿಗೆ ಕೊಡುತ್ತಾನೆ. ಅವಾಗ ಪಾರ್ವತಿ ದೇವಿಯು ಅಂದಿನಿಂದ ಈ ದಿನವನ್ನ ಕಾರ ಹುಣ್ಣಿಮೆ ಅಂತ ಆಚರಿಸಲಿ ಅಂತ ಆಶೀರ್ವಾದ ಮಾಡಿದಳು. ಕುದಿಯುವ ಪಾತ್ರೆಯಿಂದ ಹೊನ್ನ ಹೊರ ತೆಗೆದ ದಿನವನ್ನ ಹೊನ್ನಹುಗ್ಗಿ ಅಂತ ಆಚರಿಸಲಿ ಎಂದು ಆಶೀರ್ವದಿಸಿದ ದಿನದಿಂದ ಕಾರ ಹುಣ್ಣಿಮೆ ಆಚರಿಸಲಾಗುತ್ತದೆ ಅಂತ ಪ್ರತೀತಿ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು