6:43 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದಲ್ಲಿ ಕಾರಹುಣ್ಣಿಮೆ ಸಂಭ್ರಮ: ಗಡಿ ಭಾಗದಲ್ಲಿ ಮಣ್ಣೆತ್ತಿನ ಖರೀದಿ ಜೋರು; ಹಸುಗಳಿಗೆ ಬಣ್ಣದ ಹಗ್ಗ ಗೊಂಡೆಗೆ ಮುಗಿಬಿದ್ದ ರೈತರು

03/06/2023, 21:14

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ಕಾರ ಹುಣ್ಣಿಮೆಯನ್ನ ಸಂಭ್ರಮದಿಂದ ಆಚರಿಸಲ್ಪಡುತ್ತದೆ. ಅದರಲ್ಲು ಉತ್ತರ ಕರ್ನಾಟಕದಲ್ಲಿ ತನ್ನದೇ ವಿಶೇಷತೆಯಿಂದ ಆಚರಿಸಲ್ಪಡುತ್ತದೆ. ಇದರಂಗವಾಗಿ ಮಣ್ಣೆತ್ತಿನ ಖರೀದಿಯು ಜೋರಾಗಿಯೇ ನಡೆಯಿತು.
ಬೆಳಗಾವಿಯ ಕಾಗವಾಡ ವಿಧಾನ ಸಭಾ ಕ್ಷೇತ್ರದ ಸಂಬರಗಿ ಗ್ರಾಮದಲ್ಲಿ ಕಾರಹುಣ್ಣಿಮೆ ನಿಮಿತ್ಯ ಬಣ್ಣ ಬಣ್ಣದ ಹಗ್ಗ ಗೊಂಡೆಗಳನ್ನ ತೆಗೆದುಕೊಳ್ಳಲು ರೈತರು ಅಂಗಡಿ ಮುಂಗ್ಗಟ್ಟಿಗೆ ಮುಗಿ ಬಿದಿದ್ದರು. ಗ್ರಾಮದ ಕುಂಬಾರರ ಮನೆಯಲ್ಲಿನ ಮಣ್ಣೆತ್ತಿನ ಪೂಜೆ ಮಾಡುವುದು ವಾಡಿಕೆ ಇದೆ ಅದರಂತೆ ಮಣ್ಣೆತ್ತಿನ ಖರೀದಿಯು ಜೋರಾಗಿ ಇತ್ತು.

ಸುಮಾರು ಮೂರು ದಿನಗಳ ಕಾಲ ಆಚರಿಸುವ ಕಾರಹುಣ್ಣಿಮೆ ಮಳೆಗಾಲದ ಮೊದಲ ಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೊದಲನೆ ದಿನ ಹೊನ್ನಹುಗ್ಗಿ, ಎರಡನೆ ದಿನ ಕಾರ ಹುಣ್ಣಿಮೆ ಹಾಗೂ ಮೂರನೇ ದಿನ ಕರಿ ಹರಿಯುವಿಕೆ ಅಂತಾ ಆಚರಿಸಲ್ಪಡುತ್ತದೆ. ಕಾರ ಹುಣ್ಣಿಮೆ ಆಚರಣೆಗೆ ತನ್ನದೇ ಪುರಾತನ ಹಿನ್ನೆಲೆಯು ಇದೆ.
ಒಮ್ಮೆ ಕೈಲಾಸದಲ್ಲಿ ಪಾರ್ವತಿ ದೇವಿಯು ಹುಗ್ಗಿ ( ಪಾಯಸ ) ಮಾಡುವಾಗ ಬೆರಳಲ್ಲಿದ್ದ ಚಿನ್ನದ ಉಂಗುರ ಜಾರಿ ಪಾತ್ರೆಯಲ್ಲಿದ್ದ ಕುದಿಯುವ ಹುಗ್ಗಿ ( ಪಾಯಸ ) ದಲ್ಲಿ ಬಿಳ್ಳುತ್ತದೆ. ಅವಾಗ ಪಾರ್ವತಿ ದೇವಿಯು ಉಂಗುರ ಹೊರತೆಗೆಯಲು ಪ್ರಯತ್ನಿಸುತ್ತಾಳೆ. ಎಷ್ಟೇ ಪ್ರಯತ್ನ ಪಟ್ಟರು ಉಂಗುರ ಹೊರತೆಗೆಯಲು ಆಗದೆ ಇದ್ದಾಗ ಪಾರ್ವತಿ ದೇವಿಯು ಶಿವನ ಮೊರೆ ಹೋಗುತ್ತಾಳೆ. ಅವಾಗ ಶಿವನ ವಾಹನ ನಂದಿಗೆ ಶಿವ ಆದ್ನೇ ನೀಡುತ್ತಾನೆ. ಅವಾಗ ನಂದಿಯು ತನ್ನ ಕೊಂಬಿ ನಿಂದ ಕುದಿಯುತ್ತಿದ್ದ ಹುಗ್ಗಿ ( ಪಾಯಸ ) ದಿಂದ ಚಿನ್ನದ ಉಂಗುರ ಹೊರತೆಗೆದು ಪಾರ್ವತಿ ದೇವಿಗೆ ಕೊಡುತ್ತಾನೆ. ಅವಾಗ ಪಾರ್ವತಿ ದೇವಿಯು ಅಂದಿನಿಂದ ಈ ದಿನವನ್ನ ಕಾರ ಹುಣ್ಣಿಮೆ ಅಂತ ಆಚರಿಸಲಿ ಅಂತ ಆಶೀರ್ವಾದ ಮಾಡಿದಳು. ಕುದಿಯುವ ಪಾತ್ರೆಯಿಂದ ಹೊನ್ನ ಹೊರ ತೆಗೆದ ದಿನವನ್ನ ಹೊನ್ನಹುಗ್ಗಿ ಅಂತ ಆಚರಿಸಲಿ ಎಂದು ಆಶೀರ್ವದಿಸಿದ ದಿನದಿಂದ ಕಾರ ಹುಣ್ಣಿಮೆ ಆಚರಿಸಲಾಗುತ್ತದೆ ಅಂತ ಪ್ರತೀತಿ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು