3:22 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

16/12/2024, 12:33

ಬೆಳಗಾವಿ(reporterkarnataka.com): ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನ ಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ. ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರನ್ನು ಪ್ರಶ್ನಿಸಿದರು.
*ಯಾರು ಇತ್ಯರ್ಥ ಮಾಡಿಲ್ಲವೋ ಅವರು ಕ್ಷಮೆ ಕೇಳಲಿ* ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ವನ್ನು ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು