5:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕದ ಕುರಿತ ಚರ್ಚೆಗೆ ಹಾಗೂ ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

16/12/2024, 12:33

ಬೆಳಗಾವಿ(reporterkarnataka.com): ವಕ್ಫ್ ಮಂಡಳಿ ಕುರಿತು ಸರ್ಕಾರ ವಿಧಾನ ಮಂಡಲದಲ್ಲಿ ಉತ್ತರ ನೀಡಬೇಕಿದೆ. ಸರ್ಕಾರ ಉತ್ತರ ಕರ್ನಾಟಕದ ಚರ್ಚೆಗೂ ಸಿದ್ಧವಿದೆ. ವಕ್ಫ್ ಮಂಡಳಿ ಕುರಿತ ವಿರೋಧ ಪಕ್ಷಗಳ ಪ್ರಶ್ನೆಗಳಿಗೂ ಉತ್ತರ ನೀಡಲೂ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅವರು ಇಂದು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ವಕ್ಫ್ ಮಂಡಳಿ ಆಸ್ತಿ ಕಬಳಿಕೆ ಕುರಿತಂತೆ ಮೌನ ವಹಿಸಲು ಶಾಸಕ ಬಿ.ವೈ. ವಿಜವೇಂದ್ರ ತಮಗೆ 150 ಕೋಟಿಗಳ ಆಮಿಷ ಒಡ್ಡಿದ್ದರು ಎಂದು ಅನ್ವರ್ ಮಾಣಿಪ್ಪಾಡಿ ಅವರು ಮಾಡಿರುವ ಆರೋಪ ಸುಳ್ಳು ಎಂಬ ಮಾಣಿಪ್ಪಾಡಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅವರೇ ಸ್ವತಃ ಹಿಂದೆ ಆಮಿಷ ಒಡ್ಡಿದ್ದರು ಎಂದು ಹೇಳಿರುವುದರ ಮೇಲೆ ನಾವು ಪ್ರತಿಕ್ರಿಯೆ ನೀಡಿದ್ದೇವೆ. ಅವರೇ ಪತ್ರಿಕಾಗೋಷ್ಠಿ ಕರೆದು ನೀಡಿರುವ ಹೇಳಿಕೆಗೆ ನನ್ನ ಪ್ರಕಾರ ಪ್ರತಿಕ್ರಿಯೆ ನೀಡಿರುವುದು ಸರಿಯಾಗಿದೆ. ಈಗ ಬಹಳ ವರ್ಷಗಳ ನಂತರ ಹೇಳಿಲ್ಲ ಎನ್ನುತ್ತಿದ್ದಾರೆ. ಏನು ಮಾಡಬೇಕು ಎಂದು ನೀವೇ ಹೇಳಿ ಎಂದು ಮುಖ್ಯಮಂತ್ರಿಗಳು ಮಾಧ್ಯಮದವರನ್ನು ಪ್ರಶ್ನಿಸಿದರು.
*ಯಾರು ಇತ್ಯರ್ಥ ಮಾಡಿಲ್ಲವೋ ಅವರು ಕ್ಷಮೆ ಕೇಳಲಿ* ಪ್ರಹ್ಲಾದ ಜೋಶಿ ಅವರು ಪಂಚಮಸಾಲಿ ಸಮುದಾಯಕ್ಕೆ ವನ್ನು ಪ್ರವರ್ಗ 2ಎ ಮೀಸಲಾತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಹೋರಾಟದಲ್ಲಿ ಆಗಿರುವ ಅವಘಡಕ್ಕಾಗಿ ಸಿಎಂ ಕ್ಷಮೆ ಕೇಳಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾರು ಸಮಸ್ಯೆಯನ್ನು ಇತ್ಯರ್ಥ ಮಾಡಿಲ್ಲವೋ ಅವರೇ ಕ್ಷಮೆ ಕೇಳಲಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು