10:42 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ನೋಂದಣಿ: ಸಚಿವ ಪ್ರಿಯಾಂಕ್ ಖರ್ಗೆ

13/12/2024, 21:27

ಬೆಳಗಾವಿ (reporterkarnataka.com): ಉತ್ತರ ಕರ್ನಾಟಕ ಭಾಗದಲ್ಲಿ ಉದ್ಯೋಗ ಸೃಷ್ಟಿಯ ಉದ್ದೇಶದಿಂದ ಬಿಯಾಂಡ್ ಬೆಂಗಳೂರು ಕಾರ್ಯಕ್ರಮದಡಿಯಲ್ಲಿ 432 ನವೋದ್ಯಮ ಉದ್ದಿಮೆಗಳು ಆರಂಭಕ್ಕೆ ನೋಂದಣಿಯನ್ನು ಮಾಡಿಕೊಂಡಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ನಡೆದ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ ನಡೆದ ವಿಶೇಷ ಚರ್ಚೆ ಸಂದರ್ಭದಲ್ಲಿ ಉತ್ತರಿಸಿದರು.
ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆ , ಹೊಸ ಆವಿಷ್ಕಾರಗಳನ್ನು ಮಾಡುವ ನಿಟ್ಟಿನಲ್ಲಿ 432 ನವೋದ್ಯಮ ಉದ್ದಿಮೆಗಳ ಆರಂಭಕ್ಕೆ ನೋಂದಣಿ ಮಾಡಿಕೊಂಡಿದ್ದು ಆ ಮೂಲಕ ಈ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿ ಯಾಗಲಿದ್ದು, ನಿಪುಣ ಕರ್ನಾಟಕ ಯೋಜನೆಯಡಿ ಕೂಡಾ ಈ ಭಾಗಕ್ಕೆ ಹೆಚ್ಚಿನ ಅವಕಾಶಗಳನ್ನು ನೀಡಲಾಗುತ್ತಿದೆ ಎಂದರು.
ಸದಸ್ಯ ಕೇಶವ ಪ್ರಸಾದ್ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿ ಹಲವು ಐತಿಹಾಸಿಕ ಪ್ರಸಿದ್ಧ ದೇವಾಲಯಗಳಿದ್ದು ಇಲ್ಲಿ ಟೆಂಪಲ್ ಟೂರಿಸಮ್ ಅಭಿವೃದ್ಧಿ ಪಡಿಸಬಹುದು ಅಲ್ಲದೆ ಹೆಚ್ಚಿನ ಸಂಖ್ಯೆಯ ಅಣೆಕಟ್ಟುಗಳಿದ್ದು ಅವುಗಳ ಹಿನ್ನೀರಿನಲ್ಲಿ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಬಹುದಾಗಿದೆ. ಕರಡಿಧಾಮ, ಪಕ್ಷಿಧಾಮ ಗಳಿದ್ದು , ರೋಪ್ ವೇ ಮೂಲಕ ಆಕರ್ಷಿಸಬಹುದಾದ ಸ್ಥಳಗಳಿದ್ದು,ರಸ್ತೆ, ರೈಲು ಮಾತ್ತು ವಾಯು ಮಾರ್ಗದ ವ್ಯವಸ್ಥೆಯಿದ್ದು ಇವೆಲ್ಲವುಗಳನ್ನು ಬಳಸಿಕೊಂಡು ಈ ಭಾಗವನ್ನು ಅಭಿವೃದ್ಧಿಗೊಳಿಸಬೇಕು ಎಂದರು.
ಸದಸ್ಯ ಎಂ. ನಾಗರಾಜ್ ಮಾತನಾಡಿ, ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆ ಗಳ ಸ್ಥಾಪನೆ ಆಗಬೇಕು, ನೀರಾವರಿ ಸಮಸ್ಯೆಗಳ ಬಗ್ಗೆ ಕೇಂದ್ರದ ಮೇಲೆ ಒತ್ತಡ ತಂದು ಬಗೆಹರಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಸದಸ್ಯರಾದ ಡಿ.ಟಿ.ಶ್ರೀನಿವಾಸ್ , ಪ್ರತಾಪ್ ಸಿಂಹ ನಾಯಕ್ ಮಾತನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು