4:35 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ನಾಮಪತ್ರ ಸಲ್ಲಿಕೆ: ಭಾರಿ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು

20/04/2023, 14:50

ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ದೊರಕಿದ್ದು, ಗುರುವಾರ ಅವರು ಬೃಹತ್ ಜನಸ್ತೋಮದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಪಾದಯಾತ್ರೆಯಲ್ಲಿ ಆಗಮಿಸಿದ ಇನಾಯತ್ ಆಲಿ ಅವರು ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.
ಇದಕ್ಕೆ ಮುನ್ನ ನಗರದ ಕಾವೂರು ಜಂಕ್ಷನ್ ನಲ್ಲಿ ಪಕ್ಷದ ಸಾರ್ವಜನಿಕ ಸಭೆ ನಡೆಯಿತು. ಪಕ್ಷದ ಅಭ್ಯರ್ಥಿ ಇನಾಯತ್ ಆಲಿ ಅವರು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಭಾರಿ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ನೆರೆದಿದ್ದರು.
ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆದಿತ್ತು. ಆದರೆ ಕೊನೆ ಕ್ಷಣದಲ್ಲಿ ಟಿಕೆಟ್ ಇನಾಯತ್ ಆಲಿ ಅವರಿಗೆ ಒಲಿದಿತ್ತು.
ಜಾತ್ಯತೀತ ಮನೋಭಾವದ ಇನಾಯತ್ ಅಲಿ ಅವರು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ. ವಿದ್ಯಾರ್ಥಿ ದಿಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಕಾಂಗ್ರೆಸ್ ವಿದ್ಯಾರ್ಥಿ ಘಟಕವಾದ ಎನ್ ಎಸ್ ಯುಐ ಮೂಲಕ ಹಲವಾರು ವಿದ್ಯಾರ್ಥಿ ಹೋರಾಟಗಳಲ್ಲಿ ಮಂಚೂಣಿಯಲ್ಲಿ ಇರುತ್ತಿದ್ದರು. ನಂತರ ಅವರು ಸ್ಥಳೀಯ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಸೇವೆಗೈದು ಕಟ್ಟಾ ಕಾಂಗ್ರೆಸಿಗ ಎನಿಸಿಕೊಂಡರು.
ಇನಾಯತ್ ಆಲಿ ಅವರು ಮೊದಲ ಬಾರಿ 1997ರಲ್ಲಿ ಎನ್ ಎಸ್ ಯುಐ ಬ್ಲಾಕ್ ಅಧ್ಯಕ್ಷರಾಗಿ ಆಯ್ಕೆಯಾದರು. 2000ನೇ ಇಸವಿಯಲ್ಲಿ ಎನ್ ಎಸ್ ಯುಐ ರಾಜ್ಯ ಉಪಾಧ್ಯಕ್ಷನಾಗಿ, 2003 ರಲ್ಲಿ
ರಾಷ್ಟ್ರೀಯ ಕಾರ್ಯದರ್ಶಿಯಾಗಿ, 2005 ರಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದರು.
2009 ರಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಪ್ರಸ್ತುತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುದ್ದೆ ಮಾತ್ರವಲ್ಲದೆ ಎನ್ ಎಸ್ ಯುಐ ರಾಜ್ಯ ಉಸ್ತುವಾರಿಯಾಗಿ ಸೇವೆ ಮಾಡುತ್ತಿದ್ದಾರೆ.
ವೃತ್ತಿಯಲ್ಲಿ ಇನಾಯತ್ ಅಲಿ ಅವರು ಒಬ್ಬ ಯಶಸ್ವಿ ಉದ್ಯಮಿ. ಇವರು ಈ‌ ಹಿಂದಿನಿಂದಲೂ ಪ್ರತಿಫಲಾಪೇಕ್ಷೆ ಬಯಸದೆ ಸಮಾಜ ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡವರು. ತನ್ನ ಸಾಮಾಜಿಕ ‌ಸೇವಾ ಕಾರ್ಯಗಳಿಗಾಗಿ ನೋಂದಾಯಿತ ಐಎಎಮ್ ಫೌಂಡೇಶನ್ ಸಂಸ್ಥೆಯನ್ನು ಸ್ಥಾಪಿಸಿ ಸಂಸ್ಥೆಯ ಮೂಲಕ ಕಳೆದ ಹಲವಾರು ವರ್ಷಗಳಿಂದ ಬಡಜನರ ಶೈಕ್ಷಣಿಕ, ಆರೋಗ್ಯ, ವಸತಿ ಇತ್ಯಾದಿ ಅಗತ್ಯಗಳಿಗೆ ಸ್ಪಂದಿಸಿದ್ದಾರೆ ಹಾಗೂ ಅದೆಷ್ಟೋ ಬಡ ಕುಟುಂಬದ ಯುವತಿಯರ ವಿವಾಹ ಕಾರ್ಯದಲ್ಲಿ ಜಾತಿ-ಮತ ನೋಡದೆ ಸಹಾಯ ಮಾಡಿರುತ್ತಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲೂ ವರ್ಷಗಳಿಂದ ನಿರಂತರವಾಗಿ ತನ್ನ ಸೇವಾ ಚಟುವಟಿಕೆಗಳ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿರುತ್ತಾರೆ.
ಕೊರೋನ ಸಂಧರ್ಭದಲ್ಲೂ ಆರ್ಥಿಕವಾಗಿ ಕಂಗೆಟ್ಟಿದ್ದ ಅದೆಷ್ಟೋ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.
ಸ್ನೇಹಮಯಿ, ಸದಾ ಹಸನ್ಮುಖಿ ಮತ್ತು ಸಂವೇದನಾಶೀಲ ಗುಣವುಳ್ಳ ವ್ಯಕ್ತಿತ್ವ ಇನಾಯತ್ ಅಲಿ ಅವರದ್ದಾಗಿದೆ. ಇವರು ರಾಜಕೀಯ, ಸಾಮಾಜಿಕ ರಂಗದಲ್ಲಿ ಸಾಕಷ್ಟು ಅನುಭವವನ್ನು ಹೊಂದಿರುತ್ತಾರೆ. ತನ್ನ ಸೇವಾ ಚಟುವಟಿಕೆಗಳ ಮೂಲಕ ಹೆಸರಾಗಿರುವ ಇವರು ಈ ಬಾರಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧ ಪಕ್ಷಗಳಿಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿದ್ದಾರೆ ಎಂದು ರಾಜಕೀಯ ತಜ್ಞರ ಅಭಿಪ್ರಾಯ.

ಇತ್ತೀಚಿನ ಸುದ್ದಿ

ಜಾಹೀರಾತು