8:25 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಣೆ

29/05/2021, 21:00

ಮಂಗಳೂರು(reporterkarnataka news):

ಕೋವಿಡ್ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಬಂದರು ಉತ್ತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ಮತ್ತು ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ವತಿಯಿಂದ ಶಾಸಕ ಡಿ. ವೇದವ್ಯಾಸ್ ಕಾಮತ್ ರೈನ್ ಕೋಟ್ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪೋಲಿಸ್ ಇಲಾಖೆ ಜನರ ಸುರಕ್ಷತೆಗಾಗಿ ಹಗಲಿರುಳು ಶ್ರಮಿಸುತ್ತಿದೆ. ಕೋವಿಡ್ ವಾರಿಯರ್ಸ್‌ ಆಗಿ ದುಡಿಯುತ್ತಿರುವ ಅವರಿಗೆ ನಾವೆಲ್ಲರೂ ಧೈರ್ಯ ತುಂಬಬೇಕಿದೆ. ಆ ನಿಟ್ಟಿನಲ್ಲಿ ಮಹಾಲಕ್ಷ್ಮಿ ಜ್ಯುವೆಲರ್ಸ್ ಹಾಗೂ ಕೆಎನ್ಎಸ್ ಬಿ ಫಲ್ಗುಣಿ ಟ್ಯಾಕ್ಸ್ ಟೇಲ್ಸ್ ಅವರು ರೈನ್ ಕೋಟ್ ಗಳನ್ನು ನೀಡಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಮನೆ ಮಂದಿಯನ್ನೆಲ್ಲ ಬಿಟ್ಟು ದುಡಿಯುವ‌ ಪೋಲಿಸರಿಗೆ ಈ ಮೂಲಕ ಗೌರವ‌ ಸಲ್ಲಿಸಿದಂತಾಗಿದೆ ಎಂದು ಶಾಸಕ ಕಾಮತ್ ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಪೂರ್ಣಿಮಾ, ಸೆಂಟ್ರಲ್ ಉಪ ವಿಭಾಗದ ಎಸಿಪಿಪಿ ಎ. ಹೆಗಡೆ, ಬಂದರು ಠಾಣೆ ಇನ್ಸ್ಪೆಕ್ಟರ್ ಗೋವಿಂದ ರಾಜು ಪಿ, ಬಂದರು ಠಾಣೆ ಉಪನಿರೀಕ್ಷಕರು, ಮಹಾಲಕ್ಷ್ಮೀ ಜ್ಯುವೆಲ್ಲರ್ಸ್ ನ ರವೀಂದ್ರ ಎಂ ನಿಕಮ್, ಕೆ ಎನ್ ಎಸ್ ಬಿ ಫಲ್ಗುಣಿ ಟೆಕ್ಸ್ ಟೈಲ್ಸ್ ನ ಮನೋಜ್ ಕುಮಾರ್, ದೇವಿ ಚರಣ್ ಶೆಟ್ಟಿ, ರಮೇಶ್ ಹೆಗ್ಡೆ, ಮುರಳಿಧರ್ ನಾಯಕ್, ಗಿರೀಶ್ ಕುಮಾರ್, ಗಣೇಶ್ ನಾಯಕ್, ಮತ್ತು ಪ್ರಮೋದ್ ಆಚಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು