5:30 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶ; ಸಚಿವರು ಹೊಟೇಲ್‌ಗಳಲ್ಲಿ  ತಂಗುವಂತಿಲ್ಲ, ಅಧಿಕಾರಿಗಳಿಗೆ 30 ನಿಮಿಷಗಳಿಗೂ ಹೆಚ್ಚು ಲಂಚ್ ಬ್ರೇಕ್ ಇಲ್ಲ

15/04/2022, 10:50

ಲಕ್ನೋ (reporterkarnataka.com): ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್‌ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್‌ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಯೋಗಿ ಆದಿತ್ಯನಾಥ್ ತಮ್ಮ ನಿವಾಸದಲ್ಲಿ ನಡೆದ 9ನೇ ತಂಡದ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ, ಸರ್ಕಾರಿ ಅಧಿಕಾರಿಗಳು ಕಚೇರಿ ಕೆಲಸಗಳ ಸಂದರ್ಭದಲ್ಲಿ ಹೆಚ್ಚು ಸಮಯವನ್ನು ಊಟದಲ್ಲಿಯೇ ಕಳೆಯುತ್ತಾರೆ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಊಟದ ವಿರಾಮ 30 ನಿಮಿಷ ಮೀರದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 1:30 ರಿಂದ 2:00 ಗಂಟೆಯವರೆಗೆ ಊಟದ ವಿರಾಮ ಇರುತ್ತದೆ. ಆದರೆ ಕೆಲವರು ಊಟದ ವಿರಾಮವನ್ನು ಹೆಚ್ಚು ಸಮಯ ತೆಗೆದುಕೊಂಡು ಬಳಿಕ ತಮ್ಮ ಕಚೇರಿಗಳಿಗೆ ಹಿಂತಿರುಗುತ್ತಾರೆ. ಹೀಗಾಗಿ ಎಲ್ಲರೂ 30 ನಿಮಿಷಗಳ ಊಟದ ವಿರಾಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ನೌಕರರು ಸರಿಯಾದ ಸಮಯಕ್ಕೆ ಹಾಜರಿರಬೇಕು. ಒಂದು ವೇಳೆ ತಡವಾಗಿ ಕಚೇರಿಗೆ ಬಂದಲ್ಲಿ ಅವರನ್ನು ಸ್ವೀಕರಿಸಲಾಗುವುದಿಲ್ಲ. ಹಿರಿಯ ಅಧಿಕಾರಿಗಳು ನಿತ್ಯ ಕಚೇರಿಗಳಲ್ಲಿ ದಿಢೀರ್ ತಪಾಸಣೆ ನಡೆಸಬೇಕು. ಈ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಇದರೊಂದಿಗೆ ಸಾರ್ವಜನಿಕರು ನೀಡುವ ದೂರುಗಳ ಬಗ್ಗೆ ತಕ್ಷಣವೇ ಗಮನಹರಿಸಬೇಕು. ಯಾವುದೇ ಕಡತಗಳು 3 ದಿನಗಳಿಗೂ ಹೆಚ್ಚು ದಿನ ಬಾಕಿಯಿಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಪ್ತ ಸಹಾಯಕರನ್ನಾಗಿ ಸಂಬಂಧಿಗಳನ್ನು ನೇಮಕ ಮಾಡಬೇಡಿ ಎಂದು ಸಂಪುಟದ ಮಂತ್ರಿಗಳಿಗೆ ಯೋಗಿ ಸೂಚಿಸಿದ್ದಾರೆ.

ಸರ್ಕಾರಿ ಕೆಲಸಗಳು ತಡವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈ ಕ್ರಮವನ್ನು ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು