3:15 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶ; ಸಚಿವರು ಹೊಟೇಲ್‌ಗಳಲ್ಲಿ  ತಂಗುವಂತಿಲ್ಲ, ಅಧಿಕಾರಿಗಳಿಗೆ 30 ನಿಮಿಷಗಳಿಗೂ ಹೆಚ್ಚು ಲಂಚ್ ಬ್ರೇಕ್ ಇಲ್ಲ

15/04/2022, 10:50

ಲಕ್ನೋ (reporterkarnataka.com): ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್‌ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್‌ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಯೋಗಿ ಆದಿತ್ಯನಾಥ್ ತಮ್ಮ ನಿವಾಸದಲ್ಲಿ ನಡೆದ 9ನೇ ತಂಡದ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ, ಸರ್ಕಾರಿ ಅಧಿಕಾರಿಗಳು ಕಚೇರಿ ಕೆಲಸಗಳ ಸಂದರ್ಭದಲ್ಲಿ ಹೆಚ್ಚು ಸಮಯವನ್ನು ಊಟದಲ್ಲಿಯೇ ಕಳೆಯುತ್ತಾರೆ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಊಟದ ವಿರಾಮ 30 ನಿಮಿಷ ಮೀರದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 1:30 ರಿಂದ 2:00 ಗಂಟೆಯವರೆಗೆ ಊಟದ ವಿರಾಮ ಇರುತ್ತದೆ. ಆದರೆ ಕೆಲವರು ಊಟದ ವಿರಾಮವನ್ನು ಹೆಚ್ಚು ಸಮಯ ತೆಗೆದುಕೊಂಡು ಬಳಿಕ ತಮ್ಮ ಕಚೇರಿಗಳಿಗೆ ಹಿಂತಿರುಗುತ್ತಾರೆ. ಹೀಗಾಗಿ ಎಲ್ಲರೂ 30 ನಿಮಿಷಗಳ ಊಟದ ವಿರಾಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ನೌಕರರು ಸರಿಯಾದ ಸಮಯಕ್ಕೆ ಹಾಜರಿರಬೇಕು. ಒಂದು ವೇಳೆ ತಡವಾಗಿ ಕಚೇರಿಗೆ ಬಂದಲ್ಲಿ ಅವರನ್ನು ಸ್ವೀಕರಿಸಲಾಗುವುದಿಲ್ಲ. ಹಿರಿಯ ಅಧಿಕಾರಿಗಳು ನಿತ್ಯ ಕಚೇರಿಗಳಲ್ಲಿ ದಿಢೀರ್ ತಪಾಸಣೆ ನಡೆಸಬೇಕು. ಈ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಇದರೊಂದಿಗೆ ಸಾರ್ವಜನಿಕರು ನೀಡುವ ದೂರುಗಳ ಬಗ್ಗೆ ತಕ್ಷಣವೇ ಗಮನಹರಿಸಬೇಕು. ಯಾವುದೇ ಕಡತಗಳು 3 ದಿನಗಳಿಗೂ ಹೆಚ್ಚು ದಿನ ಬಾಕಿಯಿಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಪ್ತ ಸಹಾಯಕರನ್ನಾಗಿ ಸಂಬಂಧಿಗಳನ್ನು ನೇಮಕ ಮಾಡಬೇಡಿ ಎಂದು ಸಂಪುಟದ ಮಂತ್ರಿಗಳಿಗೆ ಯೋಗಿ ಸೂಚಿಸಿದ್ದಾರೆ.

ಸರ್ಕಾರಿ ಕೆಲಸಗಳು ತಡವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈ ಕ್ರಮವನ್ನು ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು