8:35 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಉತ್ತರ ಪ್ರದೇಶ; ಸಚಿವರು ಹೊಟೇಲ್‌ಗಳಲ್ಲಿ  ತಂಗುವಂತಿಲ್ಲ, ಅಧಿಕಾರಿಗಳಿಗೆ 30 ನಿಮಿಷಗಳಿಗೂ ಹೆಚ್ಚು ಲಂಚ್ ಬ್ರೇಕ್ ಇಲ್ಲ

15/04/2022, 10:50

ಲಕ್ನೋ (reporterkarnataka.com): ಸಚಿವರು ಇನ್ನು ಮುಂದೆ ರಾಜ್ಯದ ಜಿಲ್ಲೆಗಳಲ್ಲಿ ಪ್ರವಾಸಕ್ಕೆ ತೆರಳುವಾಗ ಹೊಟೇಲ್‌ಗಳಲ್ಲಿ ಉಳಿದುಕೊಳ್ಳುವ ಬದಲು ಗೆಸ್ಟ್ ಹೌಸ್‌ಗಳಲ್ಲಿ ಉಳಿದುಕೊಳ್ಳುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಯೋಗಿ ಆದಿತ್ಯನಾಥ್ ತಮ್ಮ ನಿವಾಸದಲ್ಲಿ ನಡೆದ 9ನೇ ತಂಡದ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ, ಸರ್ಕಾರಿ ಅಧಿಕಾರಿಗಳು ಕಚೇರಿ ಕೆಲಸಗಳ ಸಂದರ್ಭದಲ್ಲಿ ಹೆಚ್ಚು ಸಮಯವನ್ನು ಊಟದಲ್ಲಿಯೇ ಕಳೆಯುತ್ತಾರೆ ಎಂಬ ದೂರುಗಳು ಕೇಳಿ ಬಂದಿವೆ. ಹೀಗಾಗಿ ಊಟದ ವಿರಾಮ 30 ನಿಮಿಷ ಮೀರದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 1:30 ರಿಂದ 2:00 ಗಂಟೆಯವರೆಗೆ ಊಟದ ವಿರಾಮ ಇರುತ್ತದೆ. ಆದರೆ ಕೆಲವರು ಊಟದ ವಿರಾಮವನ್ನು ಹೆಚ್ಚು ಸಮಯ ತೆಗೆದುಕೊಂಡು ಬಳಿಕ ತಮ್ಮ ಕಚೇರಿಗಳಿಗೆ ಹಿಂತಿರುಗುತ್ತಾರೆ. ಹೀಗಾಗಿ ಎಲ್ಲರೂ 30 ನಿಮಿಷಗಳ ಊಟದ ವಿರಾಮವನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಸರ್ಕಾರಿ ಕಚೇರಿಗಳಲ್ಲಿ ನಿಯೋಜನೆಗೊಂಡ ಅಧಿಕಾರಿಗಳು ಹಾಗೂ ನೌಕರರು ಸರಿಯಾದ ಸಮಯಕ್ಕೆ ಹಾಜರಿರಬೇಕು. ಒಂದು ವೇಳೆ ತಡವಾಗಿ ಕಚೇರಿಗೆ ಬಂದಲ್ಲಿ ಅವರನ್ನು ಸ್ವೀಕರಿಸಲಾಗುವುದಿಲ್ಲ. ಹಿರಿಯ ಅಧಿಕಾರಿಗಳು ನಿತ್ಯ ಕಚೇರಿಗಳಲ್ಲಿ ದಿಢೀರ್ ತಪಾಸಣೆ ನಡೆಸಬೇಕು. ಈ ಬಗ್ಗೆ ನಿರ್ಲಕ್ಷ್ಯ ತೋರುವ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ಇದರೊಂದಿಗೆ ಸಾರ್ವಜನಿಕರು ನೀಡುವ ದೂರುಗಳ ಬಗ್ಗೆ ತಕ್ಷಣವೇ ಗಮನಹರಿಸಬೇಕು. ಯಾವುದೇ ಕಡತಗಳು 3 ದಿನಗಳಿಗೂ ಹೆಚ್ಚು ದಿನ ಬಾಕಿಯಿಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಆಪ್ತ ಸಹಾಯಕರನ್ನಾಗಿ ಸಂಬಂಧಿಗಳನ್ನು ನೇಮಕ ಮಾಡಬೇಡಿ ಎಂದು ಸಂಪುಟದ ಮಂತ್ರಿಗಳಿಗೆ ಯೋಗಿ ಸೂಚಿಸಿದ್ದಾರೆ.

ಸರ್ಕಾರಿ ಕೆಲಸಗಳು ತಡವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಈ ಕ್ರಮವನ್ನು ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು