4:00 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ

21/06/2022, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.

ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ ಕಾಂಕ್ರೀಟ್ ಗೋಡೆಯೇ ಕಳಚಿ ಬಿದ್ದಿದೆ. ಕಂದಕಕ್ಕೆ ಬೀಳುವ ಹಂತದಲ್ಲಿದ್ದ ಪಿಕಪ್ ಗಾಡಿಯನ್ನು ಸ್ಥಳಿಯರ ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ.

ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಗಾಡಿ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗುತ್ತಿತ್ತು. ಅದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷದ ಅತಿವೃಷ್ಠಿಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಹೊಸತಾಗಿ ನಿರ್ಮಿಸಲಾಗಿತ್ತು. ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. 30 ಲಕ್ಷ ಹಣ ಒಂದೇ ವಾರಕ್ಕೆ ಮಣ್ಣುಪಾಲು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೂಲಿಕಾರ್ಮಿಕ ಪರಿಶಿಷ್ಟ ಪಂಗಡದವರು ಹೆಚ್ಚಿರುವ ಗ್ರಾಮಗಳು ಇದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು