9:36 PM Thursday19 - March 2026
ಬ್ರೇಕಿಂಗ್ ನ್ಯೂಸ್
ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ…

ಇತ್ತೀಚಿನ ಸುದ್ದಿ

ವಾರದೊಳಗೆ ಕುಸಿದು ಬಿದ್ದ ಸೇತುವೆ!!: 30 ಲಕ್ಷ ರೂ. ಮಣ್ಣುಪಾಲು; ಜನಪ್ರತಿನಿಧಿ, ಗುತ್ತಿಗೆದಾರರ ವಿರುದ್ಧ ಜನರ ಆಕ್ರೋಶ

21/06/2022, 11:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿ ವಾರದ ಹಿಂದೆ ಸಂಚಾರಕ್ಕೆ ತೆರೆದಿದ್ದ ನೂತನ ಸೇತುವೆ ಕುಸಿದು ಬಿದ್ದ ಘಟನೆ ಕಳಸ ತಾಲೂಕಿನ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.

ಬರಿ ಪಿಕಪ್ ಹೋಗಿದ್ದಕ್ಕೆ ಸೇತುವೆಯ ಕಾಂಕ್ರೀಟ್ ಗೋಡೆಯೇ ಕಳಚಿ ಬಿದ್ದಿದೆ. ಕಂದಕಕ್ಕೆ ಬೀಳುವ ಹಂತದಲ್ಲಿದ್ದ ಪಿಕಪ್ ಗಾಡಿಯನ್ನು ಸ್ಥಳಿಯರ ಹರಸಾಹಸ ಮಾಡಿ ಬಚಾವ್ ಮಾಡಿದ್ದಾರೆ.

ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಗಾಡಿ ಕಂದಕಕ್ಕೆ ಉರುಳಿ ಸಂಪೂರ್ಣ ನಜ್ಜುಗುಜ್ಜಾಗುತ್ತಿತ್ತು. ಅದೃಷ್ಟವಶಾತ್ ಪಿಕಪ್ ಚಾಲಕ-ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ವರ್ಷದ ಅತಿವೃಷ್ಠಿಯಿಂದ ಕೊಚ್ಚಿ ಹೋಗಿದ್ದ ಸೇತುವೆಯನ್ನು ಹೊಸತಾಗಿ ನಿರ್ಮಿಸಲಾಗಿತ್ತು. ಚೌಡಿಬಿಳಲ್, ಕಟ್ಟೆಮನೆ, ಕೊಣೆಮನೆ, ಈಚಲಹೊಳೆ ಸೇರಿದಂತೆ ಐದಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. 30 ಲಕ್ಷ ಹಣ ಒಂದೇ ವಾರಕ್ಕೆ ಮಣ್ಣುಪಾಲು, ಇಂಜಿನಿಯರ್, ಕಂಟ್ರಾಕ್ಟರ್ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೂಲಿಕಾರ್ಮಿಕ ಪರಿಶಿಷ್ಟ ಪಂಗಡದವರು ಹೆಚ್ಚಿರುವ ಗ್ರಾಮಗಳು ಇದಾಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು