1:06 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ವಾಯುಭಾರ ಕುಸಿತ: ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ

17/10/2021, 11:28

ಬೆಂಗಳೂರು(reporterkarnataka.com): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಜಿಲ್ಲೆಗಳು ದಕ್ಷಿಣ ಒಳನಾಡಿನ ಹಾಗೂ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಸಂಜೆಯಿಂದ ಮತ್ತೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

ಭಾನುವಾರ ಮತ್ತು ಸೋಮವಾರ ಕೂಡ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಳಗಾವಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಗದಗ ಸೇರಿ ಒಟ್ಟು 16 ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ

ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಹಾಗೂ ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಕರ್ನಾಟಕದಲ್ಲಿ ಅಕ್ಟೋಬರ್ 17ರವರೆಗೂ ಮಳೆ ಮುಂದುವರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

.

ಇತ್ತೀಚಿನ ಸುದ್ದಿ

ಜಾಹೀರಾತು