7:39 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ವ್ಯಾಕ್ಸಿನ್ ಕೊರತೆಯಿಂದ ಶೇ. 50ರಷ್ಟು ಲಸಿಕೆ ಕೇಂದ್ರ ಸ್ಥಗಿತ; ಪ್ರಧಾನಿ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವೇ: ಸಿದ್ದರಾಮಯ್ಯ ಪ್ರಶ್ನೆ

14/07/2021, 21:15

ಬೆಂಗಳೂರು(reporterkarnatakanews): ಪ್ರಧಾನಿ ಮೋದಿ ಅವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ.50ರಷ್ಟು ಲಸಿಕೆ ಕೇಂದ್ರಗಳು ಲಸಿಕೆ ಕೊರತೆಯಿಂದಾಗಿ ಸ್ಥಗಿತಗೊಂಡಿವೆ ಎಂದು ಆರೋಪಿಸಿದ್ದಾರೆ.

ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂದು ವರದಿಯಾಗಿದೆ.ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ಪ್ರತಿ 100 ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ.ಬೇಡಿಕೆಯ ಶೇ. 20ರಷ್ಟು ಲಸಿಕೆ ಕೂಡ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಟೀಕಿಸಿದ್ದಾರೆ.

ರಾಜ್ಯ ಸರಕಾರ ಲಸಿಕೆ ಪೂರೈಸುವಂತೆ 10ಕ್ಕಿಂತ ಹೆಚ್ಚು ಪತ್ರಗಳನ್ನು ಕೇಂದ್ರ ಸರಕಾರಕ್ಕೆ ಬರೆದಿದ್ದರೂ ಕೇಂದ್ರ ಸ್ಪಂದಿಸುತ್ತಿಲ್ಲ.ರಾಜ್ಯದಲ್ಲಿರುವ 8500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ.ಲಭ್ಯವಿರುವ ಲಸಿಕೆಗಳನ್ನು ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ ಎಂದು ಅವರು ನುಡಿದರು.

ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ನಿರಾಸೆಯಿಂದ ವಾಪಸ್ ಹೋಗುತ್ತಿದ್ದಾರೆ. ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.ಎರಡು ಡೋಸ್ ಗಳಂತೆ ಒಟ್ಟು 9.6 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು