3:52 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ವ್ಯಾಕ್ಸಿನ್ ಕೊರತೆಯಿಂದ ಶೇ. 50ರಷ್ಟು ಲಸಿಕೆ ಕೇಂದ್ರ ಸ್ಥಗಿತ; ಪ್ರಧಾನಿ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವೇ: ಸಿದ್ದರಾಮಯ್ಯ ಪ್ರಶ್ನೆ

14/07/2021, 21:15

ಬೆಂಗಳೂರು(reporterkarnatakanews): ಪ್ರಧಾನಿ ಮೋದಿ ಅವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ ಎಂದು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶೇ.50ರಷ್ಟು ಲಸಿಕೆ ಕೇಂದ್ರಗಳು ಲಸಿಕೆ ಕೊರತೆಯಿಂದಾಗಿ ಸ್ಥಗಿತಗೊಂಡಿವೆ ಎಂದು ಆರೋಪಿಸಿದ್ದಾರೆ.

ಕಳೆದ 14 ದಿನಗಳಲ್ಲಿ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗುತ್ತಿದೆ ಎಂದು ವರದಿಯಾಗಿದೆ.ರಾಜ್ಯದ ಲಸಿಕಾ ಕೇಂದ್ರಕ್ಕೆ ಬರುತ್ತಿರುವ ಪ್ರತಿ 100 ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ.ಬೇಡಿಕೆಯ ಶೇ. 20ರಷ್ಟು ಲಸಿಕೆ ಕೂಡ ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಟೀಕಿಸಿದ್ದಾರೆ.

ರಾಜ್ಯ ಸರಕಾರ ಲಸಿಕೆ ಪೂರೈಸುವಂತೆ 10ಕ್ಕಿಂತ ಹೆಚ್ಚು ಪತ್ರಗಳನ್ನು ಕೇಂದ್ರ ಸರಕಾರಕ್ಕೆ ಬರೆದಿದ್ದರೂ ಕೇಂದ್ರ ಸ್ಪಂದಿಸುತ್ತಿಲ್ಲ.ರಾಜ್ಯದಲ್ಲಿರುವ 8500 ಲಸಿಕಾ ಕೇಂದ್ರಗಳಲ್ಲಿ ಬಹುಪಾಲು ಕೇಂದ್ರಗಳು ಗ್ರಾಮೀಣ ಪ್ರದೇಶದಲ್ಲಿವೆ.ಲಭ್ಯವಿರುವ ಲಸಿಕೆಗಳನ್ನು ರಾಜಕಾರಣಿಗಳು ಮತ್ತು ಪ್ರಭಾವಿಗಳ ಶಿಫಾರಸಿನ ಮೇರೆಗೆ ನೀಡಲಾಗುತ್ತಿರುವ ದೂರುಗಳಿವೆ ಎಂದು ಅವರು ನುಡಿದರು.

ಗ್ರಾಮೀಣ ಪ್ರದೇಶಗಳ ಆಸ್ಪತ್ರೆಗಳ ಮುಂಭಾಗದಲ್ಲಿ ಲಸಿಕಾ ಆಕಾಂಕ್ಷಿಗಳು ಬೆಳಿಗ್ಗೆಯಿಂದ ಸಾಲಲ್ಲಿ ನಿಂತು ನಿರಾಸೆಯಿಂದ ವಾಪಸ್ ಹೋಗುತ್ತಿದ್ದಾರೆ. ಈಗಿನ ಅಂದಾಜಿನಂತೆ ರಾಜ್ಯದಲ್ಲಿ 4.97 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ.ಎರಡು ಡೋಸ್ ಗಳಂತೆ ಒಟ್ಟು 9.6 ಕೋಟಿ ಲಸಿಕೆಗಳು ಬೇಕಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೆ ಪೂರೈಸಿರುವುದು 2.6 ಕೋಟಿ ಲಸಿಕೆ ಮಾತ್ರ ಎಂದು ಆರೋಗ್ಯ ಇಲಾಖೆ ಹೇಳುತ್ತಿರುವುದು ಪರಿಸ್ಥಿತಿಯ ಗಂಭೀರತೆಗೆ ಸಾಕ್ಷಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು