6:04 AM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ವಾಹನಗಳ ನಂಬರ್ ಪ್ಲೇಟ್ ಮೇಲ್ಬಾಗ ಯಾವುದೇ ನಾಮಫಲಕ,  ಹೆಸರು ಬರೆಸಿದರೆ ಕಾನೂನು ಕ್ರಮ ಗ್ಯಾರಂಟಿ

02/07/2021, 07:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಮೇಲೆ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ಯಾವುದೇ ತರಹದ ನಾಮಫಲಕ ಮತ್ತು ಹೆಸರುಗಳನ್ನು ಹಾಕಬಾರದೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ  ಎಚ್. ಹನುಮಂತರಾಯಪ್ಪ ಹೇಳಿದ್ದಾರೆ.

ನಾಗಮಂಗಲದ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾಗಮಂಗಲ ತಾಲೂಕು ಹಾಗೂ ಕೆ.ಆರ್. ಪೇಟೆ ತಾಲ್ಲೂಕುಗಳಲ್ಲಿ ಸಾರ್ವಜನಿಕರು  ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ನಾಮಫಲಕಗಳನ್ನು ಹಾಕಿಕೊಂಡಿದ್ದಾರೆ. ಇದರ ಬಗ್ಗೆ
ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು.ಕಾನೂನು ಪ್ರಕಾರ ” ಜಿ “ಶ್ರೇಣಿಯ ವಾಹನಗಳನ್ನು ಬಿಟ್ಟು ಸಂಘ ಸಂಸ್ಥೆಗಳು, ಒಕ್ಕೂಟಗಳು  ಅಥವಾ ಇನ್ಯಾವುದೇ ಸಂಸ್ಥೆಗಳು ಹೆಸರೂ ಬರೆಯುವಂತಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ ಈಗಾಗಲೇ ಆದೇಶ ನೀಡಿದ್ದು, ಈಗಾಗಲೇ ಸಾರಿಗೆ ಕಚೇರಿಯಿಂದ ವಾಹನಗಳ ತಪಾಸಣಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಆದೇಶವನ್ನು ಉಲ್ಲಂಘಿಸಿದ್ದಾರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ .

ಇಲಾಖೆ ಅಧಿಕಾರಿಯಾದ ಟಿ.ಎಸ್. ಗಿರಿಧರ್,   ಸಾರಿಗೆ ಇಲಾಖೆಯ ಅಧೀಕ್ಷಕ ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು