7:12 PM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ವಾಹನಗಳ ನಂಬರ್ ಪ್ಲೇಟ್ ಮೇಲ್ಬಾಗ ಯಾವುದೇ ನಾಮಫಲಕ,  ಹೆಸರು ಬರೆಸಿದರೆ ಕಾನೂನು ಕ್ರಮ ಗ್ಯಾರಂಟಿ

02/07/2021, 07:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಮೇಲೆ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ಯಾವುದೇ ತರಹದ ನಾಮಫಲಕ ಮತ್ತು ಹೆಸರುಗಳನ್ನು ಹಾಕಬಾರದೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ  ಎಚ್. ಹನುಮಂತರಾಯಪ್ಪ ಹೇಳಿದ್ದಾರೆ.

ನಾಗಮಂಗಲದ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾಗಮಂಗಲ ತಾಲೂಕು ಹಾಗೂ ಕೆ.ಆರ್. ಪೇಟೆ ತಾಲ್ಲೂಕುಗಳಲ್ಲಿ ಸಾರ್ವಜನಿಕರು  ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ನಾಮಫಲಕಗಳನ್ನು ಹಾಕಿಕೊಂಡಿದ್ದಾರೆ. ಇದರ ಬಗ್ಗೆ
ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು.ಕಾನೂನು ಪ್ರಕಾರ ” ಜಿ “ಶ್ರೇಣಿಯ ವಾಹನಗಳನ್ನು ಬಿಟ್ಟು ಸಂಘ ಸಂಸ್ಥೆಗಳು, ಒಕ್ಕೂಟಗಳು  ಅಥವಾ ಇನ್ಯಾವುದೇ ಸಂಸ್ಥೆಗಳು ಹೆಸರೂ ಬರೆಯುವಂತಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ ಈಗಾಗಲೇ ಆದೇಶ ನೀಡಿದ್ದು, ಈಗಾಗಲೇ ಸಾರಿಗೆ ಕಚೇರಿಯಿಂದ ವಾಹನಗಳ ತಪಾಸಣಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಆದೇಶವನ್ನು ಉಲ್ಲಂಘಿಸಿದ್ದಾರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ .

ಇಲಾಖೆ ಅಧಿಕಾರಿಯಾದ ಟಿ.ಎಸ್. ಗಿರಿಧರ್,   ಸಾರಿಗೆ ಇಲಾಖೆಯ ಅಧೀಕ್ಷಕ ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು