3:25 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ವಾಹನಗಳ ಬ್ಯಾಟರಿ ಕಳವು ಪ್ರಕರಣ: 5 ಮಂದಿ ಆರೋಪಿಗಳ ಬಂಧನ; 2.21 ಲಕ್ಷ ರೂ. ಮೌಲ್ಯದ ಸೊತ್ತು ವಶ

02/11/2021, 12:15

ಕಾಪು(reporterkarnataka.com): ವಾಹನಗಳ ಬ್ಯಾಟರಿ ಕಳವುಗೈಯುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಕಾಪು ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಬಂಧಿತರನ್ನು ಕಾಪು ಮಾರಿಗುಡಿ ದೇವಸ್ಥಾನದ ಬಳಿಯ ನಿವಾಸಿ ಶರೀಫ್ (35), ಕಳತ್ತೂರು ಚಂದ್ರನಗರ ಜನತಾ ಕಾಲನಿಯ ನಿವಾಸಿ ಅಲ್ತಾಫ್ (26), ಕುಂದಾಪುರ ತೆಕ್ಕಟ್ಟೆಯ ಕಣ್ಣುಕೆರೆ ಗ್ರಾಮದ ಪ್ರಸ್ತುತ ಮೂಳೂರಿನ ಎಸ್‍ಎಸ್ ರೋಡ್ ನಿವಾಸಿ ಫರ್ಜೀನ್ ಅಹಮದ್ (21), ಮೂಳೂರಿನ ಫಿಶರೀಸ್ ರಸ್ತೆಯ ನಿವಾಸಿ ಅಫ್ಝಲ್ ರಹ್ಮಾನ್ (20), ಮೂಳೂರಿನ ಫಿಶರೀಸ್ ರಸ್ತೆಯ ಮುಹಮ್ಮದ್ ಇಜಾಝ್ (18) ಎಂದು ಗುರುತಿಸಲಾಗಿದೆ.

ಬಂಧಿತರಿಂದ 2.21 ಲಕ್ಷ ರೂ. ಮೌಲ್ಯದ 22 ಬ್ಯಾಟರಿ, ಮೂರು ಕಾರು ಸೇರಿ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಶರೀಫ್ ಶಿರ್ವ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದು, ವಾಹನಗಳ ಬ್ಯಾಟರಿ ಕಳವು ಮಾಡುತಿದ್ದ ಬಗ್ಗೆ ಪಡುಬಿದ್ರಿ, ಶಿರ್ವ ಹಾಗೂ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎಸ್‍ಪಿ ಎನ್. ವಿಷ್ಣುವರ್ಧನ್, ಎಎಸ್‍ಪಿ ಕುಮಾರಚಂದ್ರ ನಿರ್ದೆಶನದಂತೆ, ಕಾರ್ಕಳ ಡಿವೈಎಸ್‍ಪಿ ವಿಜಯ ಪ್ರಸಾದ್ ಮಾರ್ಗದರ್ಶನದಲ್ಲಿ ಕಾಪು ಇನ್ಸ್‍ಪೆಕ್ಟರ್ ಪ್ರಕಾಶ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಪಿಎಸ್‍ಐ ತಿಮ್ಮೇಶ್, ರಾಘವೇಂದ್ರ, ತಂಡದ ಪ್ರವೀಣ್ ಕುಮಾರ್, ನಾರಾಯಣ, ರಾಜೇಶ್, ಹೇಮರಾಜ್, ಸಂದೇಶ, ಆನಂದ ರಘು, ಸಂತೋಷ್ ಮುಂತಾದವರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು