12:28 AM Friday18 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ವೈಚಾರಿಕ ಹೋರಾಟದಲ್ಲಿ ಸೋತ ಕಾಂಗ್ರೆಸ್ ಮತ್ತೆ ಗೂಂಡಾಗಿರಿ ಸಂಸ್ಕೃತಿಗೆ ಮರಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ 

02/06/2022, 10:32

ಮಂಗಳೂರು(reporterkarnataka.com): ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಗ್ರಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ. ಅದು ತನ್ನ ಮೂಲದ ಗೂಂಡಾ ಸಂಸ್ಕೃತಿಗೆ ಮರಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಾಧ್ಯಮ ಜತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟಗಳಿಗೆ ಅವಕಾಶವಿದೆ. ಆದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ಮಾದರಿಯನ್ನು ಬಿಟ್ಟು ಬೇರೆ ದಾರಿ ಹಿಡಿದಿದೆ. ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಹತಾಶವಾಗಿ ಬೆಂಕಿ ಹಚ್ಚುವುದು, ಕಲ್ಲು ತೂರಾಟ ನಡೆಸುವ ಕೃತ್ಯ ನಡೆಸುತ್ತಿದೆ. ಅವರದ್ದೇ ಶಾಸಕರಾದ ಅಖಂಡ ಶ್ರೀನುವಾಸ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಅವರದ್ದೇ ನಾಯಕನಾದ ಸಂಪತ್ ಭಾಗಿಯಾಗಿದ್ದಾರೆ ಎಂದರು.

ಪ್ರಜಾಪ್ರಭುತ್ವ ಮಾದರಿಯಲ್ಲಿ ಪ್ರತಿಭಟನೆ ಹಲವು ಮಾರ್ಗಗಳಿವೆ. ಆದರೆ ಕಾಂಗ್ರೆಸ್ ಮತ್ತು ಎನ್ ಎಸ್ ಯುಐ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ. ಬಟ್ಟೆಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಪೊಲೀಸರ ಸಕಾಲಿಕ ಮಧ್ಯ ಪ್ರವೇಶದಿಂದ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವ ಕುರಿತು ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು