7:19 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವೈಚಾರಿಕ ಹೋರಾಟದಲ್ಲಿ ಸೋತ ಕಾಂಗ್ರೆಸ್ ಮತ್ತೆ ಗೂಂಡಾಗಿರಿ ಸಂಸ್ಕೃತಿಗೆ ಮರಳಿದೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ 

02/06/2022, 10:32

ಮಂಗಳೂರು(reporterkarnataka.com): ಶಿಕ್ಷಣ ಸಚಿವ ನಾಗೇಶ್ ಅವರ ಮನೆ ಮೇಲೆ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಕಾಂಗ್ರಸ್ ವೈಚಾರಿಕ ಹೋರಾಟದಲ್ಲಿ ಸೋತಿದೆ. ಅದು ತನ್ನ ಮೂಲದ ಗೂಂಡಾ ಸಂಸ್ಕೃತಿಗೆ ಮರಳಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಾಧ್ಯಮ ಜತೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೋರಾಟಗಳಿಗೆ ಅವಕಾಶವಿದೆ. ಆದರೆ ಕಾಂಗ್ರೆಸ್ ಪ್ರಜಾಪ್ರಭುತ್ವ ಮಾದರಿಯನ್ನು ಬಿಟ್ಟು ಬೇರೆ ದಾರಿ ಹಿಡಿದಿದೆ. ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಹತಾಶವಾಗಿ ಬೆಂಕಿ ಹಚ್ಚುವುದು, ಕಲ್ಲು ತೂರಾಟ ನಡೆಸುವ ಕೃತ್ಯ ನಡೆಸುತ್ತಿದೆ. ಅವರದ್ದೇ ಶಾಸಕರಾದ ಅಖಂಡ ಶ್ರೀನುವಾಸ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಅವರದ್ದೇ ನಾಯಕನಾದ ಸಂಪತ್ ಭಾಗಿಯಾಗಿದ್ದಾರೆ ಎಂದರು.

ಪ್ರಜಾಪ್ರಭುತ್ವ ಮಾದರಿಯಲ್ಲಿ ಪ್ರತಿಭಟನೆ ಹಲವು ಮಾರ್ಗಗಳಿವೆ. ಆದರೆ ಕಾಂಗ್ರೆಸ್ ಮತ್ತು ಎನ್ ಎಸ್ ಯುಐ ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ. ಬಟ್ಟೆಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಪೊಲೀಸರ ಸಕಾಲಿಕ ಮಧ್ಯ ಪ್ರವೇಶದಿಂದ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಇದರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವ ಕುರಿತು ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು