1:31 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಬಳ್ಳಾರಿ ಐಎಂಎ ಪ್ರತಿಭಟನೆ, ಖಂಡನೆ

17/08/2024, 16:58

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com
ಪಶ್ಚಿಮ ಬಂಗಾಳದ ಆರ್ ಜಿ.ಕರ್ ವೈದ್ಯಕೀಯ ಕಾಲೇಜಿನ ಪಿ.ಜಿ.ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು
ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಸಂಚಾಲಕ
ಡಾ.ರವಿಶಂಕರ್ ಒತ್ತಾಯಿಸಿದ್ದಾರೆ.
ಅವರು‌ ನಗರದ ಐಎಂಎ ಸಭಾಂಗಣದ ಬಳಿ ಇಂದು ಬಂಗಾಳದ ವೈದ್ಯೆಯ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಹತ್ಯೆಯ ಘಟನೆ ನಡೆದರೂ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೂ, ಅಲ್ಲಿಗೆ ಗೂಂಡಾಗಳು ಬಂದು ಆಸ್ಪತ್ರೆಯನ್ನು ಧ್ವಂಸ ಮಾಡಿದೆ. ಇಲ್ಲಿ ಭದ್ರತೆ ಇಲ್ಲದಂತಾಗಿದೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಿದೆ. ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.
ಆಸ್ಪತ್ರೆಗಳಿಗೆ ಯಾರು ಬೇಕಾದರೂ ಬರಬಹುದು, ಹೋಗಬಹುದು ಎಂಬಂತಿದೆ. ಇದರಿಂದ ಇಂತಹ ಪ್ರಕರಣಗಳಿಂದ ವೈದ್ಯ ವೃತ್ತಿ ಮಾಡುವುದು ಸಹ ಕಷ್ಟವಾಗಿದೆ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ಭದ್ರತಾ ವಲಯವನ್ನಾಗಿ ಮಾಡಬೇಕು.
ವೈದ್ಯರ ಮೇಲೆ ಹಲ್ಲೆ ಮಾಡುವ ಜನರ ಮೇಲೆ ಜಾಮೀನು ರಹಿತ ಬಂಧನ ಆಗುವಂತಹ ಕೇಂದ್ರದ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸಾರೆಡ್ಡಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಾಗ ವಿಡಿಯೋ ಮಾಡುವುದು ನಿಷೇಧವಿದೆ. ಕೆಲ ಸಂಘ ಸಂಸ್ಥೆಯ ಪ್ರತಿನಿಧಿಗಳು ವಿನಾಕಾರಣ ಆಸ್ಪತ್ರೆಯಲ್ಲಿ ಪ್ರವೇಶ ಮಾಡಲು ಗಲಾಟೆ ಮಾಡುವುದು ಸರಿಯಲ್ಲ ಎಂದರು.
ಪ್ರತಿಭಟನೆಯಲ್ಲಿ ಡಿ.ಹೆಚ್.ಓ ರಮೇಶ್ ಬಾಬು, ಭಾರತೀಯ ದಂತ ವೈದ್ಯಕೀಯ ಸಂಘದ ಬಳ್ಳಾರಿ ಅಧ್ಯಕ್ಷ ಡಾ. ಮಧುಸೂದನ್ ರೆಡ್ಡಿ. ಐಎಂಎ ಬಳ್ಳಾರಿ ಕಾರ್ಯದರ್ಶಿ ಡಾ. ರಾಘವೇಂದ್ರ, ಖಜಾಂಚಿ ಡಾ.ವಾರಿಜಾ ತತಗ್ರಿ, ಡಾ.ಬಿ.ಕೆ.ಸುಂದರ್, ಡಾ.ಎಸ್.ಕೆ.ಅರುಣ್, ಡಾ.ಸೋಮನಾಥ, ಡಾ.ಎಸ್.ಜೆ.ವಿ. ಭರತ್, ಅಲ್ಲದೆ ನಗರದ ಬಹುತೇಕ ಆಸ್ಪತ್ರೆಗಳ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭಾನುವಾರ ಬೆಳಿಗ್ಗೆ ವರೆಗೆ ಓಪಿಡಿ ಚಿಕಿತ್ಸೆ ಬಂದ್ ಮಾಡಿದೆ. ಸಾರ್ವಜನಿಕರು ಸಹಕರಿಸಬೇಕು. ಆದರೆ ತುರ್ತು, ಒಳ ರೋಗಿಗಳ ಚಿಕಿತ್ಸೆ ಇರುತ್ತೆ ಎಂದು ವೈದರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು