10:58 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಬಳ್ಳಾರಿ ಐಎಂಎ ಪ್ರತಿಭಟನೆ, ಖಂಡನೆ

17/08/2024, 16:58

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com
ಪಶ್ಚಿಮ ಬಂಗಾಳದ ಆರ್ ಜಿ.ಕರ್ ವೈದ್ಯಕೀಯ ಕಾಲೇಜಿನ ಪಿ.ಜಿ.ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು
ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಸಂಚಾಲಕ
ಡಾ.ರವಿಶಂಕರ್ ಒತ್ತಾಯಿಸಿದ್ದಾರೆ.
ಅವರು‌ ನಗರದ ಐಎಂಎ ಸಭಾಂಗಣದ ಬಳಿ ಇಂದು ಬಂಗಾಳದ ವೈದ್ಯೆಯ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಹತ್ಯೆಯ ಘಟನೆ ನಡೆದರೂ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೂ, ಅಲ್ಲಿಗೆ ಗೂಂಡಾಗಳು ಬಂದು ಆಸ್ಪತ್ರೆಯನ್ನು ಧ್ವಂಸ ಮಾಡಿದೆ. ಇಲ್ಲಿ ಭದ್ರತೆ ಇಲ್ಲದಂತಾಗಿದೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಿದೆ. ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.
ಆಸ್ಪತ್ರೆಗಳಿಗೆ ಯಾರು ಬೇಕಾದರೂ ಬರಬಹುದು, ಹೋಗಬಹುದು ಎಂಬಂತಿದೆ. ಇದರಿಂದ ಇಂತಹ ಪ್ರಕರಣಗಳಿಂದ ವೈದ್ಯ ವೃತ್ತಿ ಮಾಡುವುದು ಸಹ ಕಷ್ಟವಾಗಿದೆ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ಭದ್ರತಾ ವಲಯವನ್ನಾಗಿ ಮಾಡಬೇಕು.
ವೈದ್ಯರ ಮೇಲೆ ಹಲ್ಲೆ ಮಾಡುವ ಜನರ ಮೇಲೆ ಜಾಮೀನು ರಹಿತ ಬಂಧನ ಆಗುವಂತಹ ಕೇಂದ್ರದ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸಾರೆಡ್ಡಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಾಗ ವಿಡಿಯೋ ಮಾಡುವುದು ನಿಷೇಧವಿದೆ. ಕೆಲ ಸಂಘ ಸಂಸ್ಥೆಯ ಪ್ರತಿನಿಧಿಗಳು ವಿನಾಕಾರಣ ಆಸ್ಪತ್ರೆಯಲ್ಲಿ ಪ್ರವೇಶ ಮಾಡಲು ಗಲಾಟೆ ಮಾಡುವುದು ಸರಿಯಲ್ಲ ಎಂದರು.
ಪ್ರತಿಭಟನೆಯಲ್ಲಿ ಡಿ.ಹೆಚ್.ಓ ರಮೇಶ್ ಬಾಬು, ಭಾರತೀಯ ದಂತ ವೈದ್ಯಕೀಯ ಸಂಘದ ಬಳ್ಳಾರಿ ಅಧ್ಯಕ್ಷ ಡಾ. ಮಧುಸೂದನ್ ರೆಡ್ಡಿ. ಐಎಂಎ ಬಳ್ಳಾರಿ ಕಾರ್ಯದರ್ಶಿ ಡಾ. ರಾಘವೇಂದ್ರ, ಖಜಾಂಚಿ ಡಾ.ವಾರಿಜಾ ತತಗ್ರಿ, ಡಾ.ಬಿ.ಕೆ.ಸುಂದರ್, ಡಾ.ಎಸ್.ಕೆ.ಅರುಣ್, ಡಾ.ಸೋಮನಾಥ, ಡಾ.ಎಸ್.ಜೆ.ವಿ. ಭರತ್, ಅಲ್ಲದೆ ನಗರದ ಬಹುತೇಕ ಆಸ್ಪತ್ರೆಗಳ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭಾನುವಾರ ಬೆಳಿಗ್ಗೆ ವರೆಗೆ ಓಪಿಡಿ ಚಿಕಿತ್ಸೆ ಬಂದ್ ಮಾಡಿದೆ. ಸಾರ್ವಜನಿಕರು ಸಹಕರಿಸಬೇಕು. ಆದರೆ ತುರ್ತು, ಒಳ ರೋಗಿಗಳ ಚಿಕಿತ್ಸೆ ಇರುತ್ತೆ ಎಂದು ವೈದರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು