10:56 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಬಳ್ಳಾರಿ ಐಎಂಎ ಪ್ರತಿಭಟನೆ, ಖಂಡನೆ

17/08/2024, 16:58

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com
ಪಶ್ಚಿಮ ಬಂಗಾಳದ ಆರ್ ಜಿ.ಕರ್ ವೈದ್ಯಕೀಯ ಕಾಲೇಜಿನ ಪಿ.ಜಿ.ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು
ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಸಂಚಾಲಕ
ಡಾ.ರವಿಶಂಕರ್ ಒತ್ತಾಯಿಸಿದ್ದಾರೆ.
ಅವರು‌ ನಗರದ ಐಎಂಎ ಸಭಾಂಗಣದ ಬಳಿ ಇಂದು ಬಂಗಾಳದ ವೈದ್ಯೆಯ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಹತ್ಯೆಯ ಘಟನೆ ನಡೆದರೂ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೂ, ಅಲ್ಲಿಗೆ ಗೂಂಡಾಗಳು ಬಂದು ಆಸ್ಪತ್ರೆಯನ್ನು ಧ್ವಂಸ ಮಾಡಿದೆ. ಇಲ್ಲಿ ಭದ್ರತೆ ಇಲ್ಲದಂತಾಗಿದೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಿದೆ. ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.
ಆಸ್ಪತ್ರೆಗಳಿಗೆ ಯಾರು ಬೇಕಾದರೂ ಬರಬಹುದು, ಹೋಗಬಹುದು ಎಂಬಂತಿದೆ. ಇದರಿಂದ ಇಂತಹ ಪ್ರಕರಣಗಳಿಂದ ವೈದ್ಯ ವೃತ್ತಿ ಮಾಡುವುದು ಸಹ ಕಷ್ಟವಾಗಿದೆ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ಭದ್ರತಾ ವಲಯವನ್ನಾಗಿ ಮಾಡಬೇಕು.
ವೈದ್ಯರ ಮೇಲೆ ಹಲ್ಲೆ ಮಾಡುವ ಜನರ ಮೇಲೆ ಜಾಮೀನು ರಹಿತ ಬಂಧನ ಆಗುವಂತಹ ಕೇಂದ್ರದ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸಾರೆಡ್ಡಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಾಗ ವಿಡಿಯೋ ಮಾಡುವುದು ನಿಷೇಧವಿದೆ. ಕೆಲ ಸಂಘ ಸಂಸ್ಥೆಯ ಪ್ರತಿನಿಧಿಗಳು ವಿನಾಕಾರಣ ಆಸ್ಪತ್ರೆಯಲ್ಲಿ ಪ್ರವೇಶ ಮಾಡಲು ಗಲಾಟೆ ಮಾಡುವುದು ಸರಿಯಲ್ಲ ಎಂದರು.
ಪ್ರತಿಭಟನೆಯಲ್ಲಿ ಡಿ.ಹೆಚ್.ಓ ರಮೇಶ್ ಬಾಬು, ಭಾರತೀಯ ದಂತ ವೈದ್ಯಕೀಯ ಸಂಘದ ಬಳ್ಳಾರಿ ಅಧ್ಯಕ್ಷ ಡಾ. ಮಧುಸೂದನ್ ರೆಡ್ಡಿ. ಐಎಂಎ ಬಳ್ಳಾರಿ ಕಾರ್ಯದರ್ಶಿ ಡಾ. ರಾಘವೇಂದ್ರ, ಖಜಾಂಚಿ ಡಾ.ವಾರಿಜಾ ತತಗ್ರಿ, ಡಾ.ಬಿ.ಕೆ.ಸುಂದರ್, ಡಾ.ಎಸ್.ಕೆ.ಅರುಣ್, ಡಾ.ಸೋಮನಾಥ, ಡಾ.ಎಸ್.ಜೆ.ವಿ. ಭರತ್, ಅಲ್ಲದೆ ನಗರದ ಬಹುತೇಕ ಆಸ್ಪತ್ರೆಗಳ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭಾನುವಾರ ಬೆಳಿಗ್ಗೆ ವರೆಗೆ ಓಪಿಡಿ ಚಿಕಿತ್ಸೆ ಬಂದ್ ಮಾಡಿದೆ. ಸಾರ್ವಜನಿಕರು ಸಹಕರಿಸಬೇಕು. ಆದರೆ ತುರ್ತು, ಒಳ ರೋಗಿಗಳ ಚಿಕಿತ್ಸೆ ಇರುತ್ತೆ ಎಂದು ವೈದರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು