4:43 AM Friday20 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ: ಬಳ್ಳಾರಿ ಐಎಂಎ ಪ್ರತಿಭಟನೆ, ಖಂಡನೆ

17/08/2024, 16:58

ಗಣೇಶ ಇನಾಂದಾರ ಬಳ್ಳಾರಿ
info.reporterkarnataka@gmail.com
ಪಶ್ಚಿಮ ಬಂಗಾಳದ ಆರ್ ಜಿ.ಕರ್ ವೈದ್ಯಕೀಯ ಕಾಲೇಜಿನ ಪಿ.ಜಿ.ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಹತ್ಯೆಯ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಲು
ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಸಂಚಾಲಕ
ಡಾ.ರವಿಶಂಕರ್ ಒತ್ತಾಯಿಸಿದ್ದಾರೆ.
ಅವರು‌ ನಗರದ ಐಎಂಎ ಸಭಾಂಗಣದ ಬಳಿ ಇಂದು ಬಂಗಾಳದ ವೈದ್ಯೆಯ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಹತ್ಯೆಯ ಘಟನೆ ನಡೆದರೂ ಪಶ್ಚಿಮ ಬಂಗಾಳದಲ್ಲಿ ವೈದ್ಯರು ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೂ, ಅಲ್ಲಿಗೆ ಗೂಂಡಾಗಳು ಬಂದು ಆಸ್ಪತ್ರೆಯನ್ನು ಧ್ವಂಸ ಮಾಡಿದೆ. ಇಲ್ಲಿ ಭದ್ರತೆ ಇಲ್ಲದಂತಾಗಿದೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ನೀಡಿದೆ. ತನಿಖೆಯಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.
ಆಸ್ಪತ್ರೆಗಳಿಗೆ ಯಾರು ಬೇಕಾದರೂ ಬರಬಹುದು, ಹೋಗಬಹುದು ಎಂಬಂತಿದೆ. ಇದರಿಂದ ಇಂತಹ ಪ್ರಕರಣಗಳಿಂದ ವೈದ್ಯ ವೃತ್ತಿ ಮಾಡುವುದು ಸಹ ಕಷ್ಟವಾಗಿದೆ. ಅದಕ್ಕಾಗಿ ಸರ್ಕಾರಿ ಆಸ್ಪತ್ರೆಗಳನ್ನು ಭದ್ರತಾ ವಲಯವನ್ನಾಗಿ ಮಾಡಬೇಕು.
ವೈದ್ಯರ ಮೇಲೆ ಹಲ್ಲೆ ಮಾಡುವ ಜನರ ಮೇಲೆ ಜಾಮೀನು ರಹಿತ ಬಂಧನ ಆಗುವಂತಹ ಕೇಂದ್ರದ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ಬಸಾರೆಡ್ಡಿ, ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವಾಗ ವಿಡಿಯೋ ಮಾಡುವುದು ನಿಷೇಧವಿದೆ. ಕೆಲ ಸಂಘ ಸಂಸ್ಥೆಯ ಪ್ರತಿನಿಧಿಗಳು ವಿನಾಕಾರಣ ಆಸ್ಪತ್ರೆಯಲ್ಲಿ ಪ್ರವೇಶ ಮಾಡಲು ಗಲಾಟೆ ಮಾಡುವುದು ಸರಿಯಲ್ಲ ಎಂದರು.
ಪ್ರತಿಭಟನೆಯಲ್ಲಿ ಡಿ.ಹೆಚ್.ಓ ರಮೇಶ್ ಬಾಬು, ಭಾರತೀಯ ದಂತ ವೈದ್ಯಕೀಯ ಸಂಘದ ಬಳ್ಳಾರಿ ಅಧ್ಯಕ್ಷ ಡಾ. ಮಧುಸೂದನ್ ರೆಡ್ಡಿ. ಐಎಂಎ ಬಳ್ಳಾರಿ ಕಾರ್ಯದರ್ಶಿ ಡಾ. ರಾಘವೇಂದ್ರ, ಖಜಾಂಚಿ ಡಾ.ವಾರಿಜಾ ತತಗ್ರಿ, ಡಾ.ಬಿ.ಕೆ.ಸುಂದರ್, ಡಾ.ಎಸ್.ಕೆ.ಅರುಣ್, ಡಾ.ಸೋಮನಾಥ, ಡಾ.ಎಸ್.ಜೆ.ವಿ. ಭರತ್, ಅಲ್ಲದೆ ನಗರದ ಬಹುತೇಕ ಆಸ್ಪತ್ರೆಗಳ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಭಾನುವಾರ ಬೆಳಿಗ್ಗೆ ವರೆಗೆ ಓಪಿಡಿ ಚಿಕಿತ್ಸೆ ಬಂದ್ ಮಾಡಿದೆ. ಸಾರ್ವಜನಿಕರು ಸಹಕರಿಸಬೇಕು. ಆದರೆ ತುರ್ತು, ಒಳ ರೋಗಿಗಳ ಚಿಕಿತ್ಸೆ ಇರುತ್ತೆ ಎಂದು ವೈದರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು