4:29 PM Saturday17 - May 2025
ಬ್ರೇಕಿಂಗ್ ನ್ಯೂಸ್
ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ… Davanagere | ಸ್ವಾಭಿಮಾನದಿಂದ‌ ಎರಡನೇ ವರ್ಷದ ಸಂಭ್ರಮಾಚರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದುರ್ಬಲ ಗ್ರಾಪಂಗಳ ದತ್ತು ಪಡೆದು ಸಮಗ್ರ ಅಭಿವೃದ್ಧಿಪಡಿಸಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ… ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ

ಇತ್ತೀಚಿನ ಸುದ್ದಿ

ವೈದ್ಯೋ ನಾರಾಯಣೋ ಹರಿಃ: ಇದಕ್ಕೆ ತಕ್ಕ ಹೆಸರು ಮಂಗಳಾ ಆಸ್ಪತ್ರೆಯ ಸಂಸ್ಥಾಪಕ ಡಾ. ಗಣಪತಿ

01/07/2021, 11:57

ಏಪ್ರಿಲ್ 28, 2021ರ ಬುಧವಾರ ರಾತ್ರಿ 11ರ ಸಮಯ. ಸುಮಾರು ದಿನಗಳಿಂದ ಜ್ವರ ಮೈಕೈನೋವು ಎಂದು ಚಡಪಡಿಸುತ್ತಿದ್ದ ನನ್ನ ಪತ್ನಿ ಹಾಗೂ ಮಗ ಇಬ್ಬರಿಗೂ ಅಂದು ತಡೆಯಲಾರದ ವೇದನೆ. ಇದು ಕೋವಿಡ್ ಎಂದು ಆಗಲೇ ತಿಳಿದಿದ್ದ ನಮಗೆ ಗಾಬರಿ. ಮನೆಯಲ್ಲಿ ಚಿಕ್ಕಮಕ್ಕಳು.  ಸಣ್ಣ ಊರುಗಳಲ್ಲಿ ಸರಿಯಾದ ವ್ಯವಸ್ಥೆ ಇರದ ಕಾರಣ, ದೂರದ ಮಂಗಳೂರು/ ಮಣಿಪಾಲವೇ ಗತಿ. ಆಗ ನಮಗೆ ಸಹಾಯಕ್ಕೆ ಬಂದವರು ಮಂಗಳೂರಿನ ಪ್ರಸಿದ್ಧ, ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ನ ಸಂಸ್ಥಾಪಕರಾದ ಡಾ। ಗಣಪತಿ. ವಿಷಯ ತಿಳಿದ ಕೂಡಲೇ ತಮ್ಮ ಸಂಸ್ಥೆಯ ಅಂಬುಲೆನ್ಸ್ ಅನ್ನು ಕಾರ್ಕಳದಲ್ಲಿರುವ ನಮ್ಮ ಮನೆಗೆ ಕಳುಹಿಸಿ ಆಸ್ಪತ್ರೆಗೆ ದಾಖಲಿಸಿ ನುರಿತ ವೈದ್ಯರ ತಂಡದ ಸಹಾಯದೊಂದಿಗೆ ಸೂಕ್ತ ಚಿಕಿತ್ಸೆಯನ್ನು ಕೊಟ್ಟರು. ತೀವ್ರ ನಿಗಾ ವಹಿಸಿದ ಪರಿಣಾಮ, ಕೇವಲ ಎರಡೇ ದಿನಗಳಲ್ಲಿ ಸೋಂಕು ಕಡಿಮೆಯಾಯಿತು. ನನ್ನಂತಹ  ಸಾವಿರಾರು ಫಲಾನುಭವಿಗಳ ಭಾವನೆಗಳ ಸಂಕೇತವಾಗಿರುವ ಈ ನಮನಗಳು ಡಾ. ಗಣಪತಿ ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗಕ್ಕೆ  ಹಾಗೂ ಸಮಸ್ತ ವೈದ್ಯ ಲೋಕಕ್ಕೆ ಸಮರ್ಪಿತ. 

ವೈದ್ಯೋ ನಾರಾಯಣೋ ಹರಿಃ 

ಇತ್ತೀಚಿನ ಸುದ್ದಿ

ಜಾಹೀರಾತು