6:59 AM Wednesday2 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ… MSIL | ಸರಕಾರಿ, ಖಾಸಗಿ ಉತ್ಪನ್ನಗಳ ಮಾರಾಟ, ಖರೀದಿಗೆ ನೆರವಾಗಲಿದೆ ಇ ಪೋರ್ಟಲ್‌

ಇತ್ತೀಚಿನ ಸುದ್ದಿ

ವೈದ್ಯೋ ನಾರಾಯಣೋ ಹರಿಃ: ಇದಕ್ಕೆ ತಕ್ಕ ಹೆಸರು ಮಂಗಳಾ ಆಸ್ಪತ್ರೆಯ ಸಂಸ್ಥಾಪಕ ಡಾ. ಗಣಪತಿ

01/07/2021, 11:57

ಏಪ್ರಿಲ್ 28, 2021ರ ಬುಧವಾರ ರಾತ್ರಿ 11ರ ಸಮಯ. ಸುಮಾರು ದಿನಗಳಿಂದ ಜ್ವರ ಮೈಕೈನೋವು ಎಂದು ಚಡಪಡಿಸುತ್ತಿದ್ದ ನನ್ನ ಪತ್ನಿ ಹಾಗೂ ಮಗ ಇಬ್ಬರಿಗೂ ಅಂದು ತಡೆಯಲಾರದ ವೇದನೆ. ಇದು ಕೋವಿಡ್ ಎಂದು ಆಗಲೇ ತಿಳಿದಿದ್ದ ನಮಗೆ ಗಾಬರಿ. ಮನೆಯಲ್ಲಿ ಚಿಕ್ಕಮಕ್ಕಳು.  ಸಣ್ಣ ಊರುಗಳಲ್ಲಿ ಸರಿಯಾದ ವ್ಯವಸ್ಥೆ ಇರದ ಕಾರಣ, ದೂರದ ಮಂಗಳೂರು/ ಮಣಿಪಾಲವೇ ಗತಿ. ಆಗ ನಮಗೆ ಸಹಾಯಕ್ಕೆ ಬಂದವರು ಮಂಗಳೂರಿನ ಪ್ರಸಿದ್ಧ, ಮಂಗಳ ಆಸ್ಪತ್ರೆ ಮತ್ತು ಕಿಡ್ನಿ ಫೌಂಡೇಶನ್ ನ ಸಂಸ್ಥಾಪಕರಾದ ಡಾ। ಗಣಪತಿ. ವಿಷಯ ತಿಳಿದ ಕೂಡಲೇ ತಮ್ಮ ಸಂಸ್ಥೆಯ ಅಂಬುಲೆನ್ಸ್ ಅನ್ನು ಕಾರ್ಕಳದಲ್ಲಿರುವ ನಮ್ಮ ಮನೆಗೆ ಕಳುಹಿಸಿ ಆಸ್ಪತ್ರೆಗೆ ದಾಖಲಿಸಿ ನುರಿತ ವೈದ್ಯರ ತಂಡದ ಸಹಾಯದೊಂದಿಗೆ ಸೂಕ್ತ ಚಿಕಿತ್ಸೆಯನ್ನು ಕೊಟ್ಟರು. ತೀವ್ರ ನಿಗಾ ವಹಿಸಿದ ಪರಿಣಾಮ, ಕೇವಲ ಎರಡೇ ದಿನಗಳಲ್ಲಿ ಸೋಂಕು ಕಡಿಮೆಯಾಯಿತು. ನನ್ನಂತಹ  ಸಾವಿರಾರು ಫಲಾನುಭವಿಗಳ ಭಾವನೆಗಳ ಸಂಕೇತವಾಗಿರುವ ಈ ನಮನಗಳು ಡಾ. ಗಣಪತಿ ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗಕ್ಕೆ  ಹಾಗೂ ಸಮಸ್ತ ವೈದ್ಯ ಲೋಕಕ್ಕೆ ಸಮರ್ಪಿತ. 

ವೈದ್ಯೋ ನಾರಾಯಣೋ ಹರಿಃ 

ಇತ್ತೀಚಿನ ಸುದ್ದಿ

ಜಾಹೀರಾತು